ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಕ್ಕಿ ಜ್ವರ ಹೇಗೆ ಹರಡುತ್ತೆ..? ಮುಂಜಾಗ್ರತಾ ಕ್ರಮಗಳೇನು..? | ಹಕ್ಕಿ ಜ್ವರ ಸಂಪೂರ್ಣ ಮಾಹಿತಿ..

Mahesh M Dhandu by Mahesh M Dhandu
January 5, 2021
in Newsbeat, Saaksha Special, ಎಸ್ ಸ್ಪೆಷಲ್
Bird Flu
Share on FacebookShare on TwitterShare on WhatsappShare on Telegram

ಹಕ್ಕಿ ಜ್ವರ ಹೇಗೆ ಹರಡುತ್ತೆ..? ಮುಂಜಾಗ್ರತಾ ಕ್ರಮಗಳೇನು..?

ಹಕ್ಕಿ ಜ್ವರ ಸಂಪೂರ್ಣ ಮಾಹಿತಿ..

Related posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

July 9, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

July 9, 2026

ಕೊರೊನಾ ಕಾಟದ ಮಧ್ಯೆ ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಕೇರಳ ಸೇರಿದಂತೆ ದೇಶದ ಹಲವಾರು ರಾಜ್ಯಗಳಲ್ಲಿ ಈಗ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಭಾರತದಲ್ಲಿ ಹಕ್ಕಿ ಜ್ವರ ಮೊದಲು ಯಾವಾಗ ಪತ್ತೆಯಾಯ್ತು, ಈ ವೈರಸ್ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ಹಕ್ಕಿ ಜ್ವರ ಭಾರತದಲ್ಲಿ 2005 ಫೆಬ್ರವರಿ 18 ರಂದು ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಮೊದಲು ಪತ್ತೆಯಾಗಿತ್ತು. ನಂತರ ಮಾರ್ಚ್, 2006ರಲ್ಲಿ ಮಧ್ಯಪ್ರದೇಶದಲ್ಲಿ ಎರಡನೇ ಬಾರಿಗೆ ಈ ಸೋಂಕು ಕಂಡು ಬಂದಿತು. ಈ ಅವಧಿಯಲ್ಲಿ ಈ ಸೋಂಕು ಏಶಿಯಾ, ಯೂರೋಪ್ ಮತ್ತು ಆಫ್ರಿಕಾ ಪ್ರದೇಶಗಳಲ್ಲಿ ಸುಮಾರು 400 ಜನರನ್ನು ಬಲಿ ತೆಗೆದುಕೊಂಡು ಲಕ್ಷಾಂತರ ಜನರನ್ನು ರೋಗಗ್ರಸ್ಥನ್ನಾಗಿ ಮಾಡಿತ್ತು.

ಈ ಸೋಂಕಿನ ನಿಯಂತ್ರಣ ಕಾರ್ಯಾಚರಣೆಯಲ್ಲಿ ಸೋಂಕಿ ತಲುಗುಲಿದ್ದ ಒಟ್ಟು 10.44 ಲಕ್ಷ ಪಕ್ಷಿಗಳನ್ನು ಆರಿಸಿ ಸಾಯಿಸಲಾಯಿತು. ಆಗಸ್ಟ್ 2006ರಲ್ಲಿ ದೇಶವು ಸೋಂಕಿನಿಂದ ಮುಕ್ತಗೊಂಡಿತು. ಆದರೆ 2017 ಜುಲೈನಲ್ಲಿ ಮಣಿಪುರ ಹಾಗೂ 2008ರಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಆ ಸಂದರ್ಭದಲ್ಲಿ ಕ್ರಮವಾಗಿ 3.39 ಲಕ್ಷ ಹಾಗೂ 61.62 ಲಕ್ಷ ಪಕ್ಷಿಗಳನ್ನು ಕೊಲ್ಲಲಾಯಿತು. ಇದಾದ ಬಳಿಕ ಪ್ರತಿ ರಾಜ್ಯಗಳಲ್ಲಿ ಆಗಾಗ ಹಕ್ಕಿ ಜ್ವರ ಪತ್ತೆಯಾಗುತ್ತಿದೆ.

12 ನೇ ತರಗತಿ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಬಾಲಕಿಯರಿಗೂ ಸ್ಕೂಟರ್ !

ಕಳೆದ ವರ್ಷ 2020ರ ಜನವರಿಯಲ್ಲಿ ಕೇರಳದಲ್ಲಿ ಮಾರ್ಚ್ ನಲ್ಲಿ ಬಿಹಾರದಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಪಕ್ಷಿಗಳು ಹಕ್ಕಿ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿವೆ. ಇದೀಗ ಮಧ್ಯಪ್ರದೇಶ, ಹರಿಯಾಣದಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಸಾವಿರಾರು ಕಾಗೆಗಳು ಮತ್ತು ಕೋಳಿಗಳು ಸಾವನ್ನುಪ್ಪುತ್ತಿವೆ. Bird Flu

ಹಕ್ಕಿ ಜ್ವರ ಎಂದರೇನು?

ಪಕ್ಷಿಗಳಲ್ಲಿ ಏವಿಯನ್ ಇನ್ಫ್ಲುಯೆನ್ಸ್ ಟೈಪ್ ಎ ವೈರಸ್ ಗಳಿಂದ ಉಂಟಾಗುವ ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾಗಿದೆ. ಇದು ಸೌಮ್ಯದಿಂದ ತೀವ್ರ ಅನಾರೋಗ್ಯಕ್ಕೆ ಕಾರಣವಾಗಬಹುದು ಅಥವಾ ಪಕ್ಷಿಗಳಲ್ಲಿ ಹಠಾತ್ ಸಾವಿಗೂ ಕಾರಣವಾಗಬಹುದು. ಈ ಸೋಂಕಿಗೆ ಮುಖ್ಯ ಕಾರಣ ಎಚ್5ಎನ್1 ಎಂಬ ಹೆಸರಿನ ವೈರಸ್. ಇದೊಂದು ತೀವ್ರ ಸಾಂಕ್ರಾಮಿಕ ಪಿಡುಗುಗಾಗಿದೆ.
ಸಾಮಾನ್ಯವಾಗಿ ನಮ್ಮ ದೇಶೀಯ ಕೋಳಿಗಳು ದುರ್ಬಲವಾಗಿರುತ್ತವೆ. ಹೀಗಾಗಿ ಅವುಗಳಿಗೆ ಸುಲಭವಾಗಿ ಸೋಂಕು ತಗಲುತ್ತವೆ.

ಇನ್ನು ಸುಲಭವಾಗಿ ಮನುಷ್ಯರಿಗೆ ಈ ಸೋಂಕು ತಗುಲಿಸುವುದಿಲ್ಲ. ಆದರೆ, ಕೆಲವೊಮ್ಮೆ ಸೋಂಕಿತ ಕೋಳಿಗಳೊಂದಿಗೆ ಸಂಪರ್ಕ ಹೊಂದಿರುವ ಮನುಷ್ಯರಿಗೆ ಈ ಸೋಂಕು ಹರಡಬಹುದು. 2005-2006 ರಲ್ಲಿ ಈ ರೋಗಾಣು ಏಶಿಯಾ, ಯೂರೋಪ್ ಮತ್ತು ಆಫ್ರಿಕಾ ಪ್ರದೇಶಗಳಲ್ಲಿ ಸುಮಾರು 400 ಜನರನ್ನು ಬಲಿ ತೆಗೆದುಕೊಂಡು ಲಕ್ಷಾಂತರ ಜನರನ್ನು ರೋಗಗ್ರಸ್ಥನ್ನಾಗಿ ಮಾಡಿತ್ತು.

ಸೋಂಕಿತ ಪಕ್ಷಿಗಳ ಲಕ್ಷಣಗಳೇನು..?

ಹಕ್ಕಿ ಜ್ವರ ಕಾಣಿಸಿಕೊಂಡ ಪಕ್ಷಿಗಳಲ್ಲಿ ಶಕ್ತಿ ಮತ್ತು ಹಸಿವಿನ ಕೊರತೆ ಕಾಣುತ್ತೆ. ಕೆಮ್ಮು, ಸೀನುವಿಕೆ ಹಾಗೂ ಮೂಗಿನಲ್ಲಿ ದ್ರವ ಬರುವುದು, ತಲೆ ಮತ್ತು ಕಾಲುಗಳು ಊದಿಕೊಳ್ಳುತ್ತವೆ

ಮನುಷ್ಯರಲ್ಲಿ ಕಂಡು ಬರುವ ಲಕ್ಷಣಗಳೇನು..?

ಹಕ್ಕಿ ಜ್ವರದ ಸೋಂಕಿಗೆ ಒಳಗಾಗುವ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ. ಅತಿಯಾದ ಜ್ವರ, ಕೆಮ್ಮು, ತಲೆನೋವು, ಉಸಿರಾಡಲು ತೊಂದರೆಯಾಗುವುದು ಕಾಯಿಲೆಯ ಲಕ್ಷಣಗಳು. ಎಕ್ಸ್‍ರೇ ಪರೀಕ್ಷೆಯಿಂದ ಎದೆಯಲ್ಲಿ ಉಂಟಾಗಿರುವ ಬದಲಾವಣೆಗಳು ಎದ್ದು ಕಾಣುತ್ತವೆ.

Bird Flu

ಪಕ್ಷಿಗಳ ನಡುವೆ ಹಕ್ಕಿ ಜ್ವರ ಹೇಗೆ ಹರಡುತ್ತದೆ..?

ಸೋಂಕಿತ ಪಕ್ಷಿಗಳಿಂದ ಮೂಗಿನ ಮತ್ತು ಉಸಿರಾಟದ ನೇರ ಸಂಪರ್ಕದಿಂದ, ಪಕ್ಷಿಯ ಮಲ-ಮೂತ್ರವನ್ನು ನೇರ ಮುಟ್ಟುವುದರಿಂದ ಹಕ್ಕಿ ಜ್ವರ ಹರಡುತ್ತೆ.
ಆಹಾರ ಮತ್ತು ನೀರಿನ ಮಾಲಿನ್ಯ, ಕಲುಷಿತ ಉಪಕರಣಗಳ ಬಳಕೆಯಿಂದಲೂ ಈ ಸೋಂಕು ಹರಡುತ್ತದೆ.

ಸೋಂಕಿನಿಂದ ಸಾಕು ಪಕ್ಷಿಗಳನ್ನು ಸುರಕ್ಷಿತವಾಗಿಡುವುದು ಹೇಗೆ?

ಸಾಕು ಪಕ್ಷಿಗಳನ್ನು ಕಾಡು ಪಕ್ಷಿಗಳು ಮತ್ತು ಅವುಗಳ ಹಿಕ್ಕೆಗಳಿಂದ ದೂರವಿಡಬೇಕು. ಸೂಕ್ಷ್ಮ ಬಲೆ ಹೊಂದಿರುವ ಆವರಣವನ್ನು ಪಂಜರದ ಮೇಲೆ ಬಳಸಬೇಕು. ರೋಗ ಲಕ್ಷಣ ಕಂಡುಬಂದಲ್ಲಿ ಬೇರೆ ಪಕ್ಷಿಗಳನ್ನು ಕನಿಷ್ಠ 21 ದಿನಗಳವರೆಗೆ ದೂರವಿರಿಸಬೇಕು.

ಸಾಕು ಹಕ್ಕಿ ಕಾಯಿಲೆಗೊಳಗಾದರೆ ಅಥವಾ ಸತ್ತರೆ ಏನು ಮಾಡಬೇಕು?
ಮನೆಯಲ್ಲಿರುವ ಪಕ್ಷಿಗಳು ಅನಾರೋಗ್ಯಕ್ಕೆ ತುತ್ತಾದರೆ ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಿ, ಚಿಕಿತ್ಸೆ ಕೊಡಿಸಬೇಕು. ಬಳಿಕ ಆರೋಗ್ಯಕರ ಪಕ್ಷಿಗಳಿಂದ ರೋಗಗ್ರಸ್ತ ಪಕ್ಷಗಳನ್ನು ದೂರವಿಡಬೇಕು. ಇನ್ನು ಕಾಲ ಕಾಲಕ್ಕೆ ಪಂಜರವನ್ನು ತೊಳೆದು ಸೋಂಕು ರಹಿತಗೊಳಿಸುತ್ತಿರಬೇಕು. ಒಂದು ವೇಳೆ ಸೋಂಕಿನಿಂದ ಮೃತಪಟ್ಟರೇ ಪಕ್ಷಿಗಳ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿರಿಸಿ, ಬಿಗಿಯಾಗಿ ಕಟ್ಟಿ ಬಳಿಕ ವಿಲೇವಾರಿ ಮಾಡಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚರಿಕಾ ಕ್ರಮಗಳೇನು..?
ಪಂಜರವನ್ನು ತೊಳೆಯುವ ವೇಳೆ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್ ಧರಿಸಿರಬೇಕು. ಅದೇ ರೀತಿ ಸತ್ತ ಪಕ್ಷಿಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲೂ ಕೂಡ ಮಾಸ್ಕ್ ಮತ್ತು ಗ್ಲೌಸ್ ಧರಿಸಿರಬೇಕು. ಪಕ್ಷಿ ಮತ್ತು ಅದರ ಪಂಜರವನ್ನು ಕ್ಲೀನ್ ಮಾಡಿದ ಬಳಿಕ ಸೋಪ್ ನಿಂದ ಕೈಗಳನ್ನು ಚೆನ್ನಾಗಿ ಕ್ಲೀನ್ ಮಾಡಿಕೊಳ್ಳಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bird fluhakki jwaraindia
ShareTweetSendShare
Join us on:

Related Posts

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram