ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಇರಲಿ ಕ್ರಮ ಕೈಗೊಳ್ಳಿ : ಸಿಎಂಗೆ ಸಿದ್ದು ಆಗ್ರಹ
ಬೆಂಗಳೂರು : ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹೌದು..! ಬಿಟ್ ಕಾಯಿನ್ ಹಗರಣ ಬೊಮ್ಮಾಯಿ ಅವರನ್ನ ಬಲಿ ಪಡೆಯಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು.
ಇದಕ್ಕೆ ಸಿಎಂ ಬೊಮ್ಮಾಯಿ ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನವರೂ ಇದ್ದಾರೆ, ತಿಳಿದು ಮಾತನಾಡಲಿ ಎಂದು ಟಾಂಗ್ ನೀಡಿದ್ದರು.
ಇದೀಗ ಮುಖ್ಯಮಂತ್ರಿಗಳ ಈ ಹೇಳಿಕೆಗೆ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ, ತಪ್ಪಿಸಿಕೊಳ್ಳೋಕೆ ಎಸ್ಕೆಪಿಂಗ್ ಉತ್ತರ ಕೊಡಬಾರದು.
ಸಿಎಂ ರೆಸ್ಪಾನ್ಸಿಬಲ್ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅದು ಬಿಜೆಪಿ ಅವರೇ ಆಗಲಿ.
ಕಾಂಗ್ರೆಸ್ ಅವರೇ ಅಗಲಿ ಮೊದಲು ಬುಕ್ ಮಾಡಲಿ. ಬಸವರಾಜ ಬೊಮ್ಮಾಯಿ ಈ ರೀತಿ ಮಾತನಾಡುವುದು ನೋಡಿದರೆ ನನಗೆ ಅನುಮಾನ ಬರುತ್ತದೆ.
ಅವರೇ ಸಿಕ್ಕಿಹಾಕಿಕೊಂಡಿರುವಾಗೇ ನಡೆದುಕೊಳ್ಳುತ್ತಿದ್ದಾರೆ. ಆದರೆ ನಾನು ಎಲ್ಲೂ ಬೊಮ್ಮಾಯಿ ಅವರ ಹೆಸರು ಹೇಳಿಲ್ಲ. ಆದರೂ ಅವರ ಹೇಳಿಕೆಗಳು ನೋಡುತ್ತಿದ್ದರೇ ಅನುಮಾನ ಬರುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.