ಮಂತ್ರಿಗಿರಿಗಾಗಿ ಸಾಹುಕಾರ್ ಗೆ ಕೈ ಮುಗಿದ ಬಿಜೆಪಿಗರು
ಬೆಂಗಳೂರು : ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಗುಪ್ತ್ ಗುಪ್ತ್ ಮೀಟಿಂಗ್ ನಡೆದಿದೆ.
ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಆಗಲಿದ್ದು, ಸಚಿವಾಕಾಂಕ್ಷಿಗಳು ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.
ಸಚಿವಾಕಾಂಕ್ಷಿಗಳಾದ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ರಾಜುಗೌಡ, ರೇಣುಕಾಚಾರ್ಯ, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಸಾಹುಕಾರ್ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದ್ದು, ಸಿಎಂಗೆ ಸಚಿವ ಸ್ಥಾನದ ಬೇಡಿಕೆ ಸಲ್ಲಿಸುವುದು,
ಯುಪಿ ಉಪಸಮರ : 7ರಲ್ಲಿ 6 ‘ಕಮಲ’ದ ಪಾಲು ಒಂದು ‘ಸಮಾಜವಾದಿ’ಗೆ
ಹಾಲಿ ಸಚಿವರನ್ನು ಕೈ ಬಿಟ್ಟರೆ ಮತ್ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ವಿಚಾರಗಳ ಕುರಿತು ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂಗೂ ಮುನ್ನವೇ ದೆಹಲಿಗೆ ತೆರಳಲಿದ್ದಾರೆ ಸಾಹುಕಾರ್
ಬಿಜೆಪಿ ಮೂಲಗಳ ಪ್ರಕಾರ ಸಿಎಂಗೂ ಮುನ್ನವೇ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಲು ನಿರ್ಧಾರಿಸಿದ್ದಾರಂತೆ.
ಈ ವೇಳೆ ಪಕ್ಷದ ವರಿಷ್ಠರ ಮುಂದೆ ರಮೇಶ್ ಜಾರಕಿಹೊಳಿ ಈ ಸಚಿವಾಕಾಂಕ್ಷಿಗಳ ಪರ ಬ್ಯಾಟಿಂಗ್ ಮಾಡಲಿದ್ದಾರಂತೆ.
ವಿಶೇಷವೆಂದರೆ ರಮೇಶ್ ಜಾರಕಿಹೊಳಿ ಈ ಹಿಂದೆ ವಲಸೆ ಬಿಜೆಪಿಗರಿಗೆ ನಾಯಕರಾಗಿ ಗುರುತಿಸಿಕೊಂಡಿದ್ದರು.
ಈ ಸಭೆ ಮೂಲಕ ಬೆಳಗಾವಿ ಸಾಹುಕಾರ್ ಮೂಲ ಬಿಜೆಪಿ ಶಾಸಕರಿಗೂ ಲೀಡರ್ ಆದ್ರಾ ಎಂಬ ಪ್ರಶ್ನೆ ಮೂಡಿದೆ.
ಯಾಕೆಂದ್ರೆ ಇಂದು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದ ಬಹುತೇಕ ಶಾಸಕರು ಮೂಲ ಬಿಜೆಪಿಗರೇ ಆಗಿದ್ದಾರೆ.
ಇದು ಸಚಿವ ಸ್ಥಾನ ಗಿಟ್ಟಿಸಲು ರಮೇಶ್ ಜಾರಕಿಹೊಳಿ ಮೂಲಕ ಲಾಬಿಗಿಳಿದರಾ ಮೂಲ ಬಿಜೆಪಿಗರು ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel