ಬೆಂಗಳೂರು: ಲೋಕಸಭೆ ಚುನಾವಣೆ ಈಗ ಎಲ್ಲೆಡೆ ರಂಗು ಪಡೆದಿದೆ. ನಾಯಕರು ಪ್ರಚಾರದ ಅಖಾಡಕ್ಕೆ ಧುಮುಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ನ ಪ್ರಮುಖ ನಾಯಕ ಡಿಕೆ ಸಹೋದರರ ಕೋಟೆಯಿಂದಲೇ ರಣಕಹಳೆ ಮೊಳಗಿಸಲಾಗಿದೆ. ಹಳೆ ಮೈಸೂರು ಭಾಗದಿಂದ ಅವರ ಯಾತ್ರೆ ಆರಂಭವಾಗಲಿದೆ.
ಅಮಿತ್ ಶಾ ಅವರು ಇಂದು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಚನ್ನಪಟ್ಟಣದಿಂದ ರೋಡ್ ಶೋ ನಡೆಸಲಿದ್ದಾರೆ. ಬೆಳಿಗ್ಗೆ ಬಿಜೆಪಿ ನಾಯಕರೊಂದಿಗೆ ಚರ್ಚಿಸಿ ಕೆಲವು ಜಿಲ್ಲೆಗಳಲ್ಲಿ ಉಂಟಾಗಿರುವ ಟಿಕೆಟ್ ವಂಚಿತ ಅಸಮಾಧಾನ ನಾಯಕರೊಂದಿಗೆ ಚರ್ಚೆ ನಡೆಸಬಹುದು ಎನ್ನಲಾಗುತ್ತಿದೆ.
ಅಮಿತ್ ಶಾ ರೋಡ್ ಶೋ ಕುರಿತು ಡಿಕೆಶಿ ವ್ಯಂಗ್ಯವಾಡಿದ್ದು, ಮೊದಲು ತಮ್ಮ ಕಾರ್ಯಕರ್ತರನ್ನು ಒಂದು ಮಾಡಲಿ ಎಂದು ಸವಾಲು ಹಾಕಿದ್ದಾರೆ.