ಮೋದಿ ಬಳಿ ಹೋಗಲು ರಾಜ್ಯ ಬಿಜೆಪಿ ನಾಯಕರು ಗಢ ಗಢ ನಡುಗುತ್ತಾರೆ – ಸಿದ್ದರಾಮಯ್ಯ
ಬೆಳಗಾವಿ: ನುಡಿದಂತೆ ನಡೆದ ಸರ್ಕಾರ ನಮ್ಮದು. ಇಂದಿರಾ ಕ್ಯಾಂಟೀನ್ ನಿಲ್ಲಿಸುತ್ತಿದ್ದಾರೆ. ಕೇಳಿದರೆ ದುಡ್ಡಿಲ್ಲ ಅಂತಾರೆ. ಅದಕ್ಕೆ ಕುರ್ಚಿ ಬಿಟ್ಟು ಇಳಿರಿ ಎಂದಿದ್ದೆ. ಇನ್ನೂ ಅಲ್ಲೇ ಫೆವಿಕಾಲ್ ಹಾಕ್ಕೊಂಡು ಕುಳಿತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯನವರು, ಯಡಿಯೂರಪ್ಪ ಈಗಲೂ ರೈತರ ಶಾಲು ಹಾಕ್ತಾರೆ. ಅದಕ್ಕೆ ಬೆಲೆ ಇಲ್ವಾ. ಮಣ್ಣಿನ ಮಗಾ ಅಂತಾರೆ. ಸಾಲ ಮನ್ನಾ ಮಾಡಿ ಅಂದರೆ ನಮ್ಮ ಬಳಿ ನೋಟ್ ಪ್ರಿಂಟ್ ಮಷಿನ್ ಇಲ್ಲಾ ಅಂತಾರೆ. ಇವರ ಬಳಿ ನೋಟ್ ಎಣಿಸುವ ಮಷಿನ್ ಮಾತ್ರ ಸಿಗುತ್ತದೆ ಎಂದು ಟೀಕಿಸಿದರು.
ಅಕ್ಕಿ ಫ್ರೀಯಾಗಿ ಕೊಟ್ಟಿದ್ದು ನಮ್ಮಪ್ಪನ ಮನೆಯಿಂದ ಅಲ್ಲ. ನಿಮ್ಮಪ್ಪನ ಮನೆಯಿಂದ ಕೂಡ ಕೊಡಬೇಡಿ. ಜನರ ಹಣ ಅದು. ಕೆರೆಯ ನೀರು ಕೆರೆಗೆ ಚೆಲ್ಲಬೇಕು. ನಾವು ಮತ್ತೇ 23ಕ್ಕೆ ಅಧಿಕಾರಕ್ಕೆ ಬರುತ್ತೇವೆ. ಆಗ 10 ಕೇಜಿ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಮೋದಿ ಬಳಿ ಹೋಗಲು ರಾಜ್ಯ ಬಿಜೆಪಿ ನಾಯಕರು ಗಢ ಗಢ ನಡುಗುತ್ತಾರೆ. ನಿಮಗೆ ಭಯ ಇದ್ದರೆ ನಮ್ಮನ್ನು ಕರೆಯಿರಿ ನಾವು ಬಂದು ಮಾತನಾಡುತ್ತೇವೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಕನಸಷ್ಟೆ
ಸಿದ್ದರಾಮಯ್ಯನವರ ಕಾಲದ್ದೇ ಅತ್ಯಂತ ಕೆಟ್ಟ ಆಡಳಿತ : ಸಿ.ಟಿ.ರವಿ
ಬಿಜೆಪಿಯ ಪಾಪದ ಫಲ ಜನತೆ ಅನುಭವಿಸುವಂತಾಗಿದೆ : ಸಿದ್ದರಾಮಯ್ಯ