Basavaraja bommai | ತಾಕತ್ ಇದ್ರೆ, ಧಮ್ ಇದ್ರೆ ನಿಲ್ಸಿ : ಕಾಂಗ್ರೆಸ್ ಗೆ ಸಿಎಂ ಚಾಲೆಂಜ್
ದೊಡ್ಡಬಳ್ಳಾಪುರ : ತಾಕತ್ ಇದ್ರೆ, ಧಮ್ ಇದ್ರೆ ನಿಲ್ಸಿ ಎಂದು ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾವು ಮುಂದಿನ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇವೆ. ದೊಡ್ಡಬಳ್ಳಾಪುರದಲ್ಲಿ ಆರಂಭವಾಗಿರುವ ಜನಸ್ಪಂದನಾ ಕಾರ್ಯಕ್ರಮ ಇಡೀ ರಾಜ್ಯದೆಲ್ಲೆಡೆ ಯಶಸ್ವಿಗೊಳ್ಳಲಿದೆ. ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ನಮ್ಮನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ತೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದಿಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋದಿಲ್ಲ ಎಂದರು.