ಬಾಗಲಕೋಟೆ: ಬಾಗಲಕೋಟೆ ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿ ಸವಿತಾ ಹುರಕಡ್ಲಿ ಅವರನ್ನು ಶಾಸಕ ಸಿದ್ದು ಸವದಿ ಎಳೆದಾಡಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿ, ಅವರನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದು ಸವದಿ, ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು, ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೀಳುಮಟ್ಟದ ರಾಜಕೀಯ ನಡೆಸುವ ಸಂಸ್ಕøತಿ ಬಿಜೆಪಿಯಲ್ಲಿ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋರಾತ್ರಿ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಆರೋಪಿಸಿದ್ದಾರೆ.
ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.
ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿರುವ ಡಿಕೆಶಿ, ‘ಇದು ಬಿಜೆಪಿಯ ಸಂಸ್ಕøತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾಪೆರ್Çರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೆÇಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೆÇಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ತಪ್ಪಿತಸ್ಥರ ವಿರುದ್ಧ ಕ್ರಮ
ಮಹಾಲಿಂಗಪುರ ಪುರಸಭೆಯಲ್ಲಿ ನಡೆದ ಗಲಾಟೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇಲ್ಲಿಯವರೆಗೂ ಯಾರೂ ದೂರು ನೀಡಿಲ್ಲ. ಮಹಾಲಿಂಗಪುರ ಪೆÇಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel