‘ ಹೇಡಿ ನೆಹರೂ ಕಾರಣದಿಂದ ಭಾರತ ಹಿಂದೂ ರಾಷ್ಟ್ರವಾಗಲಿಲ್ಲ ‘ : ವಿವಾದ್ಮಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ
‘ ಹೇಡಿ ನೆಹರೂ ಕಾರಣದಿಂದ ಭಾರತ ಹಿಂದೂ ರಾಷ್ಟ್ರವಾಗಲಿಲ್ಲ ‘ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ಹೇಡಿ ಜವಾಹರಲಾಲ್ ನೆಹರೂ ಅವರ ನಾಯಕತ್ವದಿಂದಾಗಿ ಸ್ವಾತಂತ್ರ್ಯದ ಸಮಯದಲ್ಲಿ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲು ಸಾಧ್ಯವಾಗಿಲ್ಲ ಎಂದು ಉತ್ತರ ಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿಕೆ ನೀಡಿದ್ದು, ಭಾರೀ ವಿವಾದಕ್ಕೆ ಗುರಿಯಾಗಿದೆ..
ಅಲ್ಲದೇ ವಿಭಜನೆಗೆ ಕಾರಣವಾದದ್ದು ಕಾಂಗ್ರೆಸ್ಸಿನ ಕೊಳಕು ಚಿಂತನೆ ಎಂದು ಆರೋಪಿಸಿದ್ದಾರೆ. ನೆಹರೂ ಪ್ರಧಾನ ಮಂತ್ರಿಯಾಗಿರದಿದ್ದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬಹುದಿತ್ತು ಎಂದಿದ್ದಾರೆ.
ಎರಡು ಸಂಸ್ಕೃತಿಗಳನ್ನು ಆಧರಿಸಿ ಎರಡು ರಾಷ್ಟ್ರಗಳು ರಚನೆಯಾದವು. ಆದರೆ ‘ಬುಜ್ಡಿಲ್’ ನೆಹರೂ ಅವರ ನಾಯಕತ್ವದಿಂದಾಗಿ ಸ್ವಾತಂತ್ರ್ಯದ ಸಮಯದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲಾಗಿಲ್ಲ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೇ ನೆಹರೂ ಬದಲಿಗೆ ಸರ್ದಾರ್ ಪಟೇಲ್ ಪ್ರಧಾನಿಯಾಗಿದ್ದರೆ ಭಾರತ ಹಿಂದೂ ರಾಷ್ಟ್ರವಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ಕಾಶ್ಮೀರದಲ್ಲಿ 370 ನೇ ವಿಧಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿದ ಅವರು, ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.