ಸರ್ಕಾರ ನಡೆಸುವುದಕ್ಕೆ ಬಿಜೆಪಿಯರು ಲಾಯಕ್ಕಿಲ್ಲ : ರಾಮಲಿಂಗಾರೆಡ್ಡಿ
ಚಿಕ್ಕಬಳ್ಳಾಪುರ : ಸರ್ಕಾರ ನಡೆಸುವುದಕ್ಕೆ ಬಿಜೆಪಿಯರು ಲಾಯಕ್ಕಿಲ್ಲ. ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಡೆಸುವುದಕ್ಕೆ ಬಿಜೆಪಿಯರು ಲಾಯಕ್ಕಿಲ್ಲ.
ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಬಿಜೆಪಿಯವರು ಅಧಿಕಾರದಲ್ಲಿ ಇರಲು ಲಾಯಕ್ಕಾ ನೀವೆ ಹೇಳಿ ಎಂದು ಪ್ರಶ್ನಿಸಿದರು.
ಇನ್ನು ಸರ್ಕಾರದ ತಪ್ಪು ನಿರ್ಧಾರದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಎಲ್ಲಿಯೂ ಬೆಡ್, ಆಕ್ಸಿಜನ್, ವೆಂಟಿಲೇಟರ್, ಐ.ಸಿ.ಯು ಸಿಗುತ್ತಿಲ್ಲ.
ರಾಜ್ಯ ಸರ್ಕಾರಕ್ಕೆ ಕೆಲಸ ಮಾಡೊ ಉತ್ಸಾಹ ಇಲ್ಲ. ರಾಜ್ಯ ಸರ್ಕಾರಕ್ಕೆ ಬಡವರು ಜನರು ಬಗ್ಗೆ ಕಾಳಜಿ ಇಲ್ಲ.
ಅವರು ಸೇವಾ ಮನೋಭಾವದಿಂದ ಅಧಿಕಾರಕ್ಕೆ ಬಂದವರಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ 35 ಜನ ಸಚಿವರುಗಳು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ ವೆಂದು ಕಿಡಿಕಾರಿದರು.