BJP : ಮೈಸೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ
ಮೈಸೂರು : ಇಂದು, ನಾಳೆ ಮೈಸೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.
ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಸಭೆಗೆ ಚಾಲನೆ ಸಿಕ್ಕಿದೆ.
ದೇಶದ ವಿವಿಧೆಡೆಗಳಿಂದ 150 ಮಂದಿ ಕಾರ್ಯಕಾರಿಣಿ ಸಮಿತಿ ಸದಸ್ಯರು ಆಗಮಿಸುತ್ತಿದ್ದಾರೆ..
ಹಲವು ಕೇಂದ್ರ ಸಚಿವರು, ಮುಖಂಡರು ಎರಡು ದಿನಗಳ ಕಾಲ ಕಾರ್ಯಕಾರಿಣಿಯಲ್ಲಿ ಭಾಗಿಯಾಗಿರಲಿದ್ದಾರೆ..
ರಾಷ್ಟ್ರೀಯ ಎಸ್ಸಿ ಮೋರ್ಚಾ ಅಧ್ಯಕ್ಷ ಲಾಲ್ ಸಿಂಗ್ ಆರ್ಯ, ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸೇರಿ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ..