BJP | ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್ : ಜೆಡಿಎಸ್ ಕಿಡಿ
ಬೆಂಗಳೂರು : ಮಾನವ ವಿಕಾಸವನ್ನೇ ಮರೆತು ಮನುಜಕುಲಕ್ಕೇ ʼಮರಣಶಾಸನʼ ಬರೆಯುತ್ತಿರುವ ರಾಜಕಾರಣ ನಿಮ್ಮದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದರೆ ಇದೇನಾ? ಅದು, ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್ ಎಂದು ರಾಜ್ಯ ಬಿಜೆಪಿ ವಿರುದ್ಧ ಜೆಡಿಎಸ್ ಪಕ್ಷ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ
ಹಲಾಲ್ ವಿಚಾರವಾಗಿ ಬಿಜೆಪಿ ವಿರುದ್ಧ ಜೆಡಿಎಸ್ ತಿರುಗಿ ಬಿದ್ದಿದ್ದು,ಟ್ವಿಟ್ಟರ್ ನಲ್ಲಿ ಕ್ಲಾಸ್ ತೆಗೆದುಕೊಂಡಿದೆ.
ಜೆಡಿಎಸ್ ಟ್ವಿಟ್ಟರ್ ನಲ್ಲಿ…
2 ಸಲ ರಚಿಸಿದ ಸರಕಾರಕ್ಕೆ ಹಣ ಎಲ್ಲಿನದು? ಜನರತೆರಿಗೆ ಹಣವನ್ನು ಕೊಳ್ಳೆ ಹೊಡೆದದ್ದು ಅಲ್ಲವೇ? ಶಾಸಕರನ್ನು ಬಜಾರಿನಲ್ಲಿ ಬಿಕರಿ ವಸ್ತುಗಳಂತೆ ಖರೀದಿ ಮಾಡಿದ ಬಿಜೆಪಿಯ ʼಅಪರೇಷನ್ ಕಮಲʼ ನಿಮ್ಮ ಅನೈತಿಕತೆಯ ಪರಾಕಾಷ್ಠೆ. ದೆಹಲಿಯಲ್ಲಿ ಸಂಸತ್ ಭವನಕ್ಕೆ ನಮಸ್ಕಾರ, ಬೆಂಗಳೂರಿನಲ್ಲಿ ಶಾಸಕರ ವ್ಯಾಪಾರ!! ಇದಾ ಹಿಂದುತ್ವ? ಇದಾ ಪ್ರಜಾಪ್ರಭುತ್ವ ಎಂದು ಜೆಡಿಎಸ್ ಪ್ರಶ್ನಿಸಿದೆ.
ಬಿಜೆಪಿ ಬಣ್ಣ ಬಿಚ್ಚಿಡುತ್ತಾ ಹೋದರೆ, ಮನುಕುಲದ ಈವರೆಗಿನ ಕ್ರೂರ-ಪೈಶಾಚಿಕ ಇತಿಹಾಸ ಮೀರಿಸುತ್ತದೆ. ಅಧಿಕಾರಕ್ಕಾಗಿ ನಡೆಸಿದ ʼನರಹಂತಕ ರಾಜಕಾರಣʼವು ಸಮಸ್ತ ಭಾರತೀಯರಿಗೆಲ್ಲ ಗೊತ್ತಿದೆ. ಮತಕ್ಕಾಗಿ ಡ್ರಾಮಾ ಯಾರದ್ದು ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ನಿತ್ಯವೂ ನಿಮ್ಮ ನಾಟಕಗಳ ಹೊಸ ಅಂಕಗಳು ಬಿಚ್ಚಿಕೊಳ್ಳುತ್ತಲೇ ಇವೆಯಲ್ಲ!
ನಿಮ್ಮ ಬಾಲಂಗೋಚಿಗಳ ಗುತ್ತಿಗೆಯಲ್ಲ ಹಿಂದುತ್ವ. ಮುಗ್ಧ ಜನರಿಗೆ ಧರ್ಮದ ಹೆಸರಿನಲ್ಲಿ ವಿಷವುಣಿಸುತ್ತಿರುವ ನಿಮ್ಮದು ಹಿಂದುತ್ವವೇ? ಮಾನವ ವಿಕಾಸವನ್ನೇ ಮರೆತು ಮನುಜಕುಲಕ್ಕೇ ʼಮರಣಶಾಸನʼ ಬರೆಯುತ್ತಿರುವ ರಾಜಕಾರಣ ನಿಮ್ಮದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದರೆ ಇದೇನಾ? ಅದು, ಸಬ್ ಕಾ ವಿನಾಶ್ & ಸಬ್ ಕಾ ಸರ್ವ ನಾಶ್.
ಹಿಂದುತ್ವ ಎಂದರೆ ದಿವ್ಯ ಪರಂಪರೆ, ಶ್ರೇಷ್ಠ ನಂಬಿಕೆ, ಪಾವನ ಶ್ರದ್ಧೆ. ಎಲ್ಲರನ್ನೂ ಒಳಗೊಳ್ಳುವ ಪರಮೋತ್ಕೃಷ್ಟ ಆದರ್ಶ. ʼನಿಮ್ಮ ಹಿಂದುತ್ವʼ ಇದಕ್ಕೆ ತದ್ವಿರುದ್ಧ. ಗಾಂಧೀಜಿಯನ್ನು ಕೊಂದವರು, ಬ್ರಿಟೀಷರಿಗೆ ಪರಿಚಾರಿಕೆ ಮಾಡಿದವರು, ಶೂದ್ರರನ್ನು ಹೊಸಕಿ ಹಾಕಿದವರು ಈಗ ಹಿಂದುತ್ವದ ಜಪ ಮಾತನಾಡುತ್ತಿರುವುದು ಈ ಶತಮಾನದ ಬಹುದೊಡ್ಡ ಜೋಕ್ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. bjp-Sub Ka Vinash & Sub Ka Sarva Nash jds tweet









