H D Kumaraswamy | ಕುಮಾರಸ್ವಾಮಿ ಅವರಲ್ಲಿ, ಕಣ್ಣೀರು & ಸುಳ್ಳಿಗೆ ಬರವಿಲ್ಲ
ಬೆಂಗಳೂರು : ದಲಿತರನ್ನ ಮುಖ್ಯಮಂತ್ರಿ ಮಾಡಲು ಪಕ್ಷ ಸಿದ್ಧ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ದಲಿತರನ್ನು ಮುಖ್ಯಮಂತ್ರಿಯಾಗಿ ಮಾಡಲು ಸಿದ್ದ ಎಂದು ಮಾಜಿ #LuckyDipCMHDK ಘೋಷಿಸಿದ್ದಾರೆ. ಜಿಲ್ಲಾಪಂಚಾಯತ್, ವಿಧಾನ ಪರಿಷತ್ ಚುನಾವಣೆಗೂ ಕುಟುಂಬಸ್ಥರನ್ನೇ ಆಯ್ಕೆ ಮಾಡುವ ಜೆಡಿಎಸ್ ಮುಖ್ಯಮಂತ್ರಿ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡುವ ಮಾತು ಕಾರ್ಯಸಾಧುವೇ? ಕುಮಾರಸ್ವಾಮಿ ಅವರಲ್ಲಿ, ಕಣ್ಣೀರು ಮತ್ತು ಸುಳ್ಳು ಇದಕ್ಕೆ ಬರವಿಲ್ಲ ಎಂದು ಬಿಜೆಪಿ ಕುಟುಕಿದೆ.
ಮಾಜಿ #LuckyDipCMHDK ಅವರೇ,
ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಾರೆ ಯಾವ ಪಕ್ಷದಿಂದ ಎಂದು ಮೊದಲು ಸ್ಪಷ್ಟಪಡಿಸಿಬಿಡಿ, ಏಕೆಂದರೆ ನೀವು ಅತಂತ್ರದ ಆಕಾಂಕ್ಷಿ.
ಜೆಡಿಎಸ್ ಪಕ್ಷದಿಂದಲೇ ದಲಿತ ಸಿಎಂ ಆಗುವುದಾದರೆ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು?
— BJP Karnataka (@BJP4Karnataka) April 6, 2022
ಮಾಜಿ #LuckyDipCMHDK ಅವರೇ, ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಾರೆ ಯಾವ ಪಕ್ಷದಿಂದ ಎಂದು ಮೊದಲು ಸ್ಪಷ್ಟಪಡಿಸಿಬಿಡಿ, ಏಕೆಂದರೆ ನೀವು ಅತಂತ್ರದ ಆಕಾಂಕ್ಷಿ. ಜೆಡಿಎಸ್ ಪಕ್ಷದಿಂದಲೇ ದಲಿತ ಸಿಎಂ ಆಗುವುದಾದರೆ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಪ್ರಶ್ನೆ ಮಾಡಿದೆ.
ಜೆಡಿಎಸ್ ಪಕ್ಷದಲ್ಲಿ ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಮಾಜಿ #LuckyDipCMHDK ಅವರು ಸ್ಪಷ್ಟನೆ ನೀಡಬಹುದು.ಅದು ಹೆಸರಿಗೆ ಮಾತ್ರ ಎಂದು ಎಲ್ಲರಿಗೂ ತಿಳಿದಿದೆ. ನಿರ್ಧಾರ ಬರುವುದೆಲ್ಲಾ ಪದ್ಮನಾಭನಗರ ಹಾಗೂ ಬಿಡದಿ ತೋಟದ ಮನೆಯಿಂದ ಎಂಬುದು ಲೋಕ ಸತ್ಯ. ರಬ್ಬರ್ ಸ್ಟ್ಯಾಂಪ್ಗಳ ಸೃಷ್ಟಿಯಲ್ಲಿ ನೀವು ಎತ್ತಿದ ಕೈ ಅಲ್ಲವೇ ಎಂದು ಬಿಜೆಪಿ ಕುಟುಕಿದೆ. BJP tweet reaction on h-d-kumaraswamy statement