ಮೈಸೂರಲ್ಲಿ ಬಿಜೆಪಿ ವರ್ಸಸ್ ಬಿಜೆಪಿ Mysore saaksha tv
ಮೈಸೂರು : ದೇವಾಲಯ ತೆರವು ವಿರೋಧಿಸಿ ಮೈಸೂರಿನಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸುತ್ತಿದೆ.
ಈ ಪ್ರತಿಭಟನೆಯಲ್ಲಿ ಶಾಸಕ ರಾಮದಾಸ್ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.
ವಿಶೇಷವೆನಂದರೇ ಪ್ರತಿಭಟನೆಯಲ್ಲಿ ಶೇಮ್ ಶೇಮ್ ಬಿಜೆಪಿ ಎಂದು ಬಿಜೆಪಿಗರೇ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಮೈಸೂರಿನ ಅರಮನೆ ಆಂಜನೇಯಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೂ ಘೋಷಣೆಗಳನ್ನು ಕೂಗಲಾಗುತ್ತಿದೆ.
ಇನ್ನು ಪ್ರತಿಭಟನೆಯಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.