ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಕಣಗಳಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳನ್ನು ಕೈವಶ ಮಾಡಿಕೊಂಡು ಇತಿಹಾಸ ಸೃಷ್ಟಿಸಿದ ಸಂಭ್ರಮದಲ್ಲಿರುವ ಬಿಜೆಪಿಗೆ ಡಬಲ್ ಖುಷಿ ಸಿಕ್ಕಿದೆ.
ಇತ್ತೀಚೆಗೆ ನಡೆದ ವಿಧಾನಪರಿಷತ್ನ ಮೂರು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಸಿಎಂ ಯಡಿಯೂರಪ್ಪ ಅವರಿಗೆ ಡಬಲ್ ಖುಷಿ ತಂದಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಿಂದ ನಾಲ್ಕನೇ ಬಾರಿಗೆ ಗೆಲುವು ಸಾಧಿüಸಿದ್ದಾರೆ. ಪುಟ್ಟಣ್ಣ 7,335 ಮತಗಳನ್ನು ಗಳಿಸಿದ್ರೆ, ಜೆಡಿಎಸ್ನ ಎ.ಪಿ ರಂಗನಾಥ್ 5,107 ಮತ ಗಳಿಸಿದರು. ಆದರೆ, ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಪಡೆದು ಹೀನಾಯ ಸೋಲು ಅನುಭವಿಸಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅಭಿಮಾನಿಗಳನ್ನು ಪುಟ್ಟಣ್ಣ ಅವರನ್ನು ಹೊತ್ತು ಸಂಭ್ರಮಿಸಿದರು.
ಮತ್ತೊಂದೆಡೆ, ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ರಾರಾ, ಶಿರಾ ಗೆದ್ದ ಬೆನ್ನಲೇ ಮೇಲ್ಮನೆ ಎಲೆಕ್ಷನ್ನಲ್ಲೂ ಗೆದ್ದು ಬೀಗಿದ ಬಿಜೆಪಿ..!.ವಿ ಸಂಕನೂರ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಪ್ರಾಶಾಸ್ತ್ಯದ ಮತ ಎಣಿಕೆಯಲ್ಲಿ ಯಾರೂ ಗೆಲ್ಲದ ಕಾರಣ, ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಬಿಜೆಪಿಯ ಶಶಿಲ್ ನಮೋಶಿ ಗೆಲುವು ಸಾಧಿಸಿದ್ದಾರೆ.
ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಒಟ್ಟಾರೆ ಕಣದಲ್ಲಿದ್ದ ಐವರು ಅಭ್ಯರ್ಥಿಗಳಲ್ಲಿ ಅತ್ಯಂತ ಕಡಿಮೆ ಮತ ಪಡೆದ ವಾಟಾಳ್ ನಾಗರಾಜ್, ಡಾ.ಚಂದ್ರಕಾಂತ ಸಿಂಗೆ, ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಅವರನ್ನು ಕ್ರಮವಾಗಿ ಸೋಲಿಸಿದ ಬಿಜೆಪಿಯ ಶಶಿಲ್ ನಮೋಶಿ, 10,212 ಮತ ಪಡೆದರೆ, ಕಾಂಗ್ರೆಸ್ನ ಶರಣಪ್ಪ ಮಟ್ಟೂರ 7082 ಮತ ಪಡೆದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel