#BJPCorruptionFiles ನ ಆಳ ಮತ್ತು ಅಗಲ ಅಳತೆಗೂ ಮೀರಿದ್ದು
ಬೆಂಗಳೂರು : #BJPCorruptionFiles ನ ಆಳ ಮತ್ತು ಅಗಲ ಅಳತೆಗೂ ಮೀರಿದ್ದು ಎಂದು ರಾಜ್ಯ ಕಾಂಗ್ರೆಸ್ ಕುಟುಕಿದೆ.
ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, #BJPCorruptionFiles ನ ಆಳ ಮತ್ತು ಅಗಲ ಅಳತೆಗೂ ಮೀರಿದ್ದು.
ಕಾರ್ಮಿಕ ಇಲಾಖೆಯಲ್ಲಿ ಟೂಲ್ ಕಿಟ್ ಖರೀದಿಯಲ್ಲಿ ನಡೆದ ಅಕ್ರಮವನ್ನು ಮುಚ್ಚಿ ಹಾಕಲಾಯ್ತು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ವಿರುದ್ಧದ ರೋಲ್ಕಾಲ್ ಆರೋಪವನ್ನು ಅದುಮಿಹಾಕಲಾಯ್ತು.
ಕರೋನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ ಹಗರಣದ ತನಿಖೆಯೇ ಆಗಲಿಲ್ಲ.
ಮಾನ್ಯ ಬಸವರಾಜ ಬೊಮ್ಮಾಯಿ ಅವರೇ, ಇಂದು ತೋಟಗಾರಿಕಾ ಸಚಿವ ಮುನಿರತ್ನರ ಕ್ಷೇತ್ರದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೀರಿ.
#BJPCorruptionFiles ನ ಆಳ ಮತ್ತು ಅಗಲ ಅಳತೆಗೂ ಮೀರಿದ್ದು.
ಕಾರ್ಮಿಕ ಇಲಾಖೆಯಲ್ಲಿ ಟೂಲ್ ಕಿಟ್ ಖರೀದಿಯಲ್ಲಿ ನಡೆದ ಅಕ್ರಮವನ್ನು ಮುಚ್ಚಿ ಹಾಕಲಾಯ್ತು.
ಕೃಷಿ ಸಚಿವ @bcpatilkourava ಅವರ ವಿರುದ್ಧದ ರೋಲ್ಕಾಲ್ ಆರೋಪವನ್ನು ಅದುಮಿಹಾಕಲಾಯ್ತು.
ಕರೋನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ ಹಗರಣದ ತನಿಖೆಯೇ ಆಗಲಿಲ್ಲ.
— Karnataka Congress (@INCKarnataka) July 17, 2022
ಮುನಿರತ್ನರ ವಿರುದ್ಧ ಕಮಿಷನ್ ಕಿರುಕುಳದ ದೂರು ಬಂದರೂ ಕ್ರಮ ಕೈಗೊಳ್ಳದಿರುವ ತಮ್ಮ ನಡೆ ಭ್ರಷ್ಟಾಚಾರಕ್ಕೆ ಮೌನ ಸಮ್ಮತಿಯೇ? ಅಥವಾ ಕ್ರಮ ಕೈಗೊಳ್ಳಲಾಗದ ಅಸಹಾಯಕತೆಯೇ?
ನಮ್ಮದು ಪ್ರಾಮಾಣಿಕ, ಪಾರದರ್ಶಕ ತನಿಖೆ ಎನ್ನುತ್ತಿರುವ ಬಸವರಾಜ ಬೊಮ್ಮಾಯಿ ಅವರೇ, ಬಿಟ್ ಕಾಯಿನ್ ಹಗರಣದ ತನಿಖೆ ಎಲ್ಲಿಯವರೆಗೂ ಬಂದಿದೆ? ಆರೋಪಿ ಶ್ರೀಕಿ ಎಲ್ಲಿ ಹೋದ?
‘ಬಿಟ್ ಕಾಯಿನ್’ ಪದ ಕೇಳಿದಾಕ್ಷಣ ನೀವು ಹಾಗೂ ನಿಮ್ಮ ಪಕ್ಷದ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಜಾರುವುದೇಕೆ? ಎಲ್ಲಿ ನಿಮ್ಮ ಪಾರದರ್ಶಕತೆ ಎಂದು ಪ್ರಶ್ನಿಸಿದೆ.