ಬ್ಲ್ಯಾಕ್ ಫಂಗಸ್ – ಚಿಕಿತ್ಸೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ತತ್ತರಿಸಿ ಹೋಗಿದ್ದಾರೆ. ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ದೇಶದ , ಹಾಗೂ ರಾಜ್ಯ , ಬೆಂಗಳೂರಿನಲ್ಲೂ ಬ್ಲಾಕ್ ಫಂಗಸ್ ವೈರಸ್ ನ ಕಾಟ ಶುರುವಾಗಿದೆ.. ರಾಜ್ಯದಲ್ಲಿ 97 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಇದ್ರಿಂದಾಗಿ ಈಗಾಗಲೇ ಹಲವು ಜೀವಗಳು ಹೋಗಿದವೆ. ಹೀಗಾಗಿ ಜನ ಮತ್ತಷ್ಟು ಆತಂಕ್ಕೆ ಒಳಗಾಗಿದ್ದಾರೆ.
ಇನ್ನೂ ಬ್ಲ್ಯಾಕ್ ಫಂಗಸ್ ಕೂಡ ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ಕಾಯಿಲೆ ಎಂದು ಅನೇಕರು ಭಾವಿಸಿದ್ದು, ಜನರು ಪ್ಯಾನಿಕ್ ಆಗಲು ಶುರುಮಾಡಿದ್ದಾರೆ. ಆದ್ರೆ ಈ ನಡುವೆ ಒಂದು ಸಮಾಧಾನ ತರಿಸುವಂತಹ ಮಾಹಿತಿ ಬ್ಲಾಕ್ ಫಂಗಸ್ ನ ಬಗ್ಗೆ ಬಹಿರಂಗವಾಗಿದೆ.. ಅದೇನೆಂದ್ರೆ ಇದು ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಲ್ಲ ಎಂದು..
ಕಪ್ಪು ಶಿಲೀಂಧ್ರ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಲ್ಲ ಹೀಗಾಗಿ ಯಾರೂ ಕೂಡ ಹೆದರುವ ಅವಶ್ಯಕತೆ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಇದೀಗ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಜತೆಗೆ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದೆ ಎನ್ನುವ ಮಾಹಿತಿಯನ್ನೂ ನೀಡಿದೆ. ಬ್ಲ್ಯಾಕ್ ಫಂಗಸ್ ಇರುವವರಿಗೆ 12-14ದಿನ ಚಿಕಿತ್ಸೆ ನೀಡಬೇಕು, ರಾಜ್ಯದ ಪ್ರಮುಖ 6 ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ, ಈ ನಿಗದಿತ ಆಸ್ಪತ್ರೆಗಳನ್ನೇ ಚಿಕಿತ್ಸೆ ಪಡೆಯಬೇಕು.
ಹುಬ್ಬಳ್ಳಿಯ ಕಿಮ್ಸ್, ಬೆಂಗಳೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆ, ಶಿವಮೊಗ್ಗದ ಮೆಡಿಕಲ್ ಕಾಲೇಜು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಕಲಬುರಗಿ ಮೆಡಿಕಲ್ ಕಾಲೇಜಿನಲ್ಲಿ ಮಾತ್ರ ಚಿಕಿತ್ಸೆ ಅವಕಾಶ ಮಾಡಿಕೊಡಲಾಗಿದೆ. ಹಾಗೆಯೇ ನಗರದಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಬ್ಲ್ಯಾಕ್ ಫಂಗಸ್ ಹೇಗೆ ಹರಡುತ್ತದೆ , ಇದರ ಲಕ್ಷಣಗಳೇನು..?
ಬ್ಲ್ಯಾಕ್ ಫಂಗಸ್ ಎನ್ನುವುದು ಒಬ್ಬರಿಂದ ಒಬ್ಬರಿಗೆ ಹರಡು ಸೋಂಕಲ್ಲ, ಫಂಗಸ್ ಎಂಬುದು ಗಾಳಿಯಲ್ಲಿ ಇರುತ್ತದೆ, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ದಾಳಿ ನಡೆಸುತ್ತದೆ. ಇದು ಮೊದಲಿಗೆ ಕಣ್ಣಿನ ಮೇಲೆ ಪ್ರಭಾವ ಬೀರುತ್ತದೆ, ಬಳಿಕ ಮೂಗಿನ ಮೂಲಕ ಮೆದುಳನ್ನು ಸೇರುತ್ತದೆ. ಎಚ್ಐವಿ, ಕ್ಯಾನ್ಸರ್ ಪೀಡಿತರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ಬ್ಲ್ಯಾಕ್ ಫಂಗಸ್ ಬಂದರೆ ಅದು ಎಲ್ಲರಿಗೂ ಗೊತ್ತಾಗುತ್ತದೆ. ಆರಂಭದಲ್ಲಿ ಕಣ್ಣಿಗೆ ಅಟ್ಯಾಕ್ ಆಗುತ್ತದೆ. ಕಣ್ಣಲ್ಲಿ ನೋವು, ಊತ ಕಾಣಿಸಿಕೊಳ್ಳುತ್ತದೆ. ಬಳಿಕ ಮೂಗು, ಬಳಿಕ ಮೆದುಳಿಗೆ ಅಟ್ಯಾಕ್ ಆಗುತ್ತದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.