ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ BBMTC ಬಸ್ ಗಳ ಸಂಚಾರ ಬಂದ್..!
ಬೆಂಗಳೂರು : ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆ ಮುಷ್ಕರ ಕೈಗೊಂಡಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಇಂದಾಗಿ ನಾಳೆ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಆಗಲಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಲಿದೆ.
ಆದ್ರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾತ್ರ BMTC ನೌಕರರು ಇಂದು ಮಧ್ಯಾಹ್ನದಿಂದಲೇ ಮುಷ್ಕರಕ್ಕೆ ಕರೆ ನೀಡಿದ್ದು, ಬಸ್ ಸಂಚಾರ ಇಂದು ಮಧ್ಯಾಹ್ನದಿಂದಲೇ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ.
ಇನ್ನೂ ಮಧ್ಯಾಹ್ನದ ಮೇಲೆ BMTC ಬಸ್ ಗಳು ರಸ್ತೆಗಳಿಯುವುದು ಬಹುತೇಕ ಡೌಟ್ ಆಗಿದ್ದು, ಇದರಿಂದ ಈಗಾಗಲೇ ಶಾಲಾ – ಕಾಲೇಜುಗಳಿಗೆ ತೆರಳಿರುವ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳಿರುವ ಜನರಿಗೆ ತುಂಬಾನೆ ತೊಂದರೆಗಳಾಗಲಿವೆ.
ಇನ್ನೂ ಮುಖ್ಯವಾಗಿ 6ನೇ ವೇತನ ಆಯೋಗ ಜಾರಿಗೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಹಾಗೂ ವೇತನ ಪರಿಷ್ಕರಣೆ, ಬಾಕಿ ವೇತನ ಪಾವತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಭಾರತದಲ್ಲಿ ಕೊರೊನಾ ರಣಕೇಕೆ… ಒಂದೇ ದಿನ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು…? ಬಲಿಯಾದವರೆಷ್ಟು..?
ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಕಡಿತ