ನೆಲಮಂಗಲ: ಬಾಯ್ಲರ್ ಸ್ಫೋಟ (Boiler explosion)ಗೊಂಡ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆ ಕೈಗಾರಿಕಾ ಪ್ರದೇಶದ ಆರ್ಗ್ಯಾನಿಕ್ ಆರೋಮೆಟಿಕ್ಸ್
ಕಂಪನಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ಚಿಗಾಮಲ್ಲಪ್ಪ ಅಲಿಯಾಸ್ ಮಂಜಪ್ಪ(35) ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ.
ಈ ಕಾರ್ಮಿಕ 1 ವರ್ಷದ ಹಿಂದೆ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ಅಲ್ಲದೇ ಇನ್ನೊಬ್ಬ ಕಾರ್ಮಿಕ ಮನೋಜ್ ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದಾಬಸ್ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.