ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್..!
ಜಮ್ಮು ಕಾಶ್ಮೀರ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ಸಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.. ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಅಕ್ಕಿ ಅಲ್ಲಿನ ಜನರೊಂದಿಗೆ ಕೆಲ ಕಾಲ ಮಾತನಾಡಿದ್ದಾರೆ. ಅಲ್ಲದೇ ಬಿಎಸ್ಎಫ್ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಸೈನಿಕರ ಜೊತೆಗೂ ಸಂವಾದ ನಡೆಸಿದ್ದಾರೆ.. ಅಲ್ಲದೇ ಹಾಡಿ, ಕುಣಿದು ಕುಪ್ಪಳಿಸಿ ಅವರನ್ನ ಮನರಂಜಿಸಿದ್ದಾರೆ.
ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕವಾಗಿ ಅಕ್ಷಯ್ ಕುಮಾರ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂದ್ಹಾಗೆ ಕಳೆದ ವರ್ಷ ಲಾಕ್ಡೌನ್ ಆರಂಭ ಆದಾಗ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್ ಕುಮಾರ್ ಎಲ್ಲರಿಗೂ ಮಾದರಿ ಆಗಿದ್ದರು.
ಇನ್ನೂ ಸಿನಿಮಾ ವಿಚಾರಕ್ಕೆ ಬಂದ್ರೆ ಅಕ್ಷಯ್ ಕುಮಾರ್ ಸದ್ಯ ರೋಹಿತ್ ಶೆಟ್ಟಿ ನಿರ್ದೇಶನದ ಸೂರ್ಯವಂಶಿ ಚಿತ್ರ ಬಿಡುಗಡೆಯಾಗಬೇಕಿದೆ.. ಬೆಲ್ ಬಾಟಂ ಸಿನಿಮಾದ ರೀಮೇಕ್ ನಲ್ಲಿ ಅಕ್ಷಯ್ ನಟಿಸಿದ್ದು, ಜುಲೈ 27ರಂದು ಚಿತ್ರಮಂದಿರದಲ್ಲಿ ರಿಲೀಸ್ ಆಗಲಿದೆ ಎನ್ನಲಾಗಿದೆ. ಇನ್ನೂ ಅತರಂಗಿರೇ, ಬಚ್ಚನ್ ಪಾಂಡೆ, ರಾಮ್ ಸೇತು ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಬಾಲಿವುಡ್ ನ ಕಿಲಾಡಿ ಅಕ್ಷಯ್ ಬ್ಯುಸಿಯಾಗಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.