ಸುಶಾಂತ್ ಸಾವಿನ ಪ್ರಕರಣದಲ್ಲಿ ದಿನೇ ದಿನೇ ಅನುಮಾನಿತರ ಪಟ್ಟಿಗೆ ಹೊಸ ಹೊಸ ಹೆಸರುಗಳು ಸೇರಿಕೊಳ್ತಿದ್ದು, ಇತ್ತೀಚೆಗಷ್ಟೇ ನಟ ಸೂರಜ್ ಪಾಂಚೋಲಿ ಅವರ ಹೆಸರು ಲಿಸ್ಟ್ ಗೆ ಎಂಟ್ರಿಯಾಗಿತ್ತು. ಅಷ್ಟೇ ಅಲ್ಲ ಸುಶಾಂತ್ ಮ್ಯಾನೇಜರ್ ದಿಶಾ ಸಾವಿಗೂ ಸೂರಜ್ ಪಾಂಚೋಲಿ ಅವರಿಗೂ ಸಂಬಂಧ ಕಲ್ಪಿಸಿಲಾಗಿತ್ತು. ಸೂರಜ್ ಪಾಂಚೋಲಿ ವಿರುದ್ಧ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ಠಾನೆ ಅವರು ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ತಮ್ಮನ್ನು ಸುಖಾಸುಮ್ಮನೆ ಈ ಪ್ರಕರಣದಲ್ಲಿ ಎಲೆತರುತ್ತಿದ್ದಾರೆ ಎಂದು ನಟ ಸೂರಜ್ ಪಾಂಚೋಲಿ ಗರಂ ಆಗಿದ್ದಾರೆ.
ಅಷ್ಟೇ ಅಲ್ಲ ತಮ್ಮ ವಿರುದ್ಧ ಆರೋಪ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ನಟ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸೋಷಿಯಲ್ ಮಿಡಿಯಾಗಳಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನ ಮಾಡಿ ಸುದ್ದಿ ಬಿತ್ತರಿಸುತ್ತಿದ್ದಾರೆ ಎಂದು ತವiಗೆ ಕಿರುಕುಳ ನಿಡುತ್ತಿರುವವರ ವಿರುದ್ಧ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಸೂರಜ್.
ಇನ್ನೂ ನನ್ನ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು. ನನ್ನ ಗೆಳತಿ ಅನುಶ್ರೀ ಗೌರ್ ಜೊತೆಗೆ 2016ರಲ್ಲಿ ತೆಗೆಸಿಕೊಮಡ ಫೋಟೋದ ಸ್ಕ್ರೀನ್ ಶಾಟ್ ಶೇರ್ ಮಾಡಿ ಆಕೆಯನ್ನು ದಿಶಾ ಸಾಲಿಯಾನ್ ಎಂದು ಬಿಂಬಿಸಲಾಗುತ್ತಿದೆ. ಆದರೆ ಇದು ಸುಳ್ಳು ಎಂದು ದೂರಿನಲ್ಲಿ ಸೂರಜ್ ಉಲ್ಲೇಖಿಸಿದ್ದಾರೆ. ಅಲ್ಲದೇ ನಟ ಸುಶಾಂತ್ ಹಾಗೂ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಜೊತೆಗೆ ನಾನು ಸಂಪರ್ಕ ಹೊಂದಿರಲಿಲ್ಲ. ಅವರಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








