ಕೊರೊನಾ ಹೆಮ್ಮಾರಿಗೆ ಬಲಿಯಾದ ನಟಿ ಶ್ರೀಪದ
ಮುಂಬೈ : ದೇಶದಲ್ಲಿ ಕೊರೊನಾ ಹೆಮ್ಮಾರಿಯಿಂದ ನಿತ್ಯ ಸಾವಿರಾರು ಜನರು ಪ್ರಾಣ ಕಳೆದುಕೊಳ್ತಿದ್ದಾರೆ. ಸ್ಯಾಂಡಲ್ ವುಡ್ , ಬಾಲಿವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಸೇರಿ ಸಿನಿಮಾರಂಗದವರು, ಸೆಲೆಬ್ರಿಟಿಗಳು ತಾರೆಯರು ಕೂಡ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದೀಗ ಮತ್ತೊಬ್ಬ ತಾರೆ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ಧಾರೆ. ಹಿಂದಿ ಹಾಗೂ ಭೋಜಪುರಿ ಸಿನಿಮಾಗಳಲ್ಲಿ ಬಹಳ ವರ್ಷಗಳಿಂದಲೂ ನಟಿಸುತ್ತಿದ್ದ ನಟಿ ಶ್ರೀಪದ ಅವರು ಕೊರೊನಾದಿಂದಾಗಿ ನಿಧನ ಹೊಂದಿದ್ದಾರೆ. ಧರ್ಮೇಂದ್ರ, ವಿನೋದ್ ಖನ್ನ ಸೇರಿದಂತೆ ಹಲವಾರು ಸ್ಟಾರ್ ನಟರೊಂದಿಗೆ ಶ್ರೀಪದ ನಟಿಸಿದ್ದರು. ಹಿಂದಿ ಮಾತ್ರವೇ ಅಲ್ಲದೆ ಭೋಜ್ಪುರಿ ಹಾಗೂ ಕೆಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದರು.
ದೇಶದಲ್ಲಿ ಕೊರೊನಾ ಹೆಮ್ಮಾರಿಯಿಂದ ನಿತ್ಯ ಸಾವಿರಾರು ಜನರು ಪ್ರಾಣ ಕಳೆದುಕೊಳ್ತಿದ್ದಾರೆ. ಸ್ಯಾಂಡಲ್ ವುಡ್ , ಬಾಲಿವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಸೇರಿ ಸಿನಿಮಾರಂಗದವರು, ಸೆಲೆಬ್ರಿಟಿಗಳು ತಾರೆಯರು ಕೂಡ ಮಹಾಮಾರಿಗೆ ಬಲಿಯಾಗಿದ್ದಾರೆ.
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.