ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಾಲಿವುಡ್ ನ ಲೆಜೆಂಡ್ ದಿಲೀಪ್ ಕುಮಾರ್ ಅಗಲಿಕೆಗೆ ಮೋದಿ ಸೇರಿದಂತೆ ಗಣ್ಯರು ಸಿನಿತಾರೆಯರಿಂದ ಸಂತಾಪ..!   

Namratha Rao by Namratha Rao
July 7, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಾಲಿವುಡ್ ನ ಲೆಜೆಂಡ್ ದಿಲೀಪ್ ಕುಮಾರ್ ಅಗಲಿಕೆಗೆ ಮೋದಿ ಸೇರಿದಂತೆ ಗಣ್ಯರು ಸಿನಿತಾರೆಯರಿಂದ ಸಂತಾಪ..!

ಮುಂಬೈ:  ಬಾಲಿವುಡ್ ನ ಲೆಜೆಂಡರಿ ನಟ ದಿಲೀಪ್ ಕುಮಾರ್ ಅವರು  ಇಂದು ವಿಧಿವಶರಾಗಿದ್ದಾರೆ.. ಕೆಲ ದಿನಗಳಿಂದ ಅನಾರೋಗ್ಯದಿಂದಾಗಿ ಹಿಂದೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟ್ರ್ಯಾಜಿಡಿ ಕಿಂಗ್  , ಚಿಕಿತ್ಸೆ ಫಲಕಾರಿಯಾಗದೇ ತಮ್ಮ 98ನೇ ವಯಸ್ಸಿನಲ್ಲಿ ಬದುಕಿನ ಪಯಣ ಮುಗಿಸಿದ್ದಾರೆ.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಟ ಕೊನೆಯುಸಿರೆಳೆದರು.

ಅವರಿಗೆ ಪ್ರದಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಿನಿಮಾ ತಾರೆಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ

“ದಿಲೀಪ್ ಕುಮಾರ್ ‘ಭಾರತೀಯ ಸಿನಿಮಾದ ದಿಗ್ಗಜ’ರಾಗಿ ನೆನಪಿನಲ್ಲಿ ಉಳಿಯುತ್ತಾರೆ. ಸರಿಸಾಟಿಯಿಲ್ಲದ ಪ್ರತಿಭೆಯ ನಟರಾಗಿ ಅನುಗ್ರಹಿತರಾಗಿದ್ದವರು. ಈ ಕಾರಣದಿಂದಾಗಿ ತಲೆಮಾರುಗಳ ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಅಪಾರ ನಷ್ಟವಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬ, ಸ್ನೇಹಿತರು ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ” ಎಂದು ಮೋದಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ

“ ಭಾರತೀಯ ಚಿತ್ರರಂಗಕ್ಕೆ ಶ್ರೇಷ್ಠ ನಾಯಕರೊಬ್ಬರ ನಷ್ಟವಾಗಿದೆ. ಅದ್ಭುತ ನಟನೆ ಹಾಗೂ ಅಪ್ರತಿಮ ಪಾತ್ರಗಳಿಂದ ತಲೆಮಾರಿಂದ ತಲೆಮಾರಿನ ಸಿನಿಮಾ ಪ್ರಿಯರನ್ನು ರಂಜಿಸಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

“ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಸಾಧಾರಣ ಕೊಡುಗೆಗಾಗಿ ಮುಂದಿನ ಪೀಳಿಗೆಯು ಸದಾ ನೆನಪಿನಲ್ಲಿಟ್ಟುಕೊಳ್ಳಲಿದೆ. ದಿಲೀಪ್ ಕುಮಾರ್ ನಿಧನಕ್ಕೆ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್

“ಭಾರತದ ಹೃದಯದಲ್ಲಿ ದಿಲೀಪ್ ಕುಮಾರ್ ಎಂದೆಂದಿಗೂ ಚಿರಾಯು” ಎಂದು ಸಂತಾಪ ಸೂಚಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್

“ಶ್ರೀ ದಿಲೀಪ್ ಕುಮಾರ್ ಅತ್ಯುತ್ತಮ ಹಾಗೂ ನೈಜ ನಟರಾಗಿದ್ದು, ಭಾರತೀಯ ಚಿತ್ರರಂಗ್ಕಕೆ ಆದರ್ಶಪ್ರಾಯವಾದ ಕೊಡುಗೆಗಾಗಿ ಎಲ್ಲರಿಂದಲೂ ಗೌರವಿಸಲ್ಪಟ್ಟಿದ್ದಾರೆ. ‘ಗಂಗಾ ಜಮುನಾ’ಗಳಂತಹ ಚಿತ್ರಗಳಲ್ಲಿ ಅವರ ಅಭಿಯನವು ಲಕ್ಷಾಂತರ ಸಿನಿ ಪ್ರೇಮಿಗಳ ಹೃದಯವನ್ನು ತಟ್ಟಿವೆ. ಅವರ ನಿಧನದಿಂದ ಅತೀವ ಬೇಸರವಾಗಿದೆ” ಎಂದು ಹೇಳಿದ್ದಾರೆ.kiccha

ಕಿಚ್ಚ ಸುದೀಪ್

”ಸಾರ್ವಕಾಲಿಕ ಶ್ರೇಷ್ಠ ನಟ, ಅದ್ಭುತ ವಾಗ್ಮಿ ಮತ್ತು ಸರಳತೆಯ ಸಾಮ್ರಾಟ್ ಎಂದು ಜಗತ್ತು ದಿಲೀಪ್ ಕುಮಾರ್‌ರನ್ನು ಶ್ಲಾಘಿಸಿತ್ತು. ಅನೇಕ ತಲೆಮಾರಿಗೆ ಅವರು ಸ್ಫೂರ್ತಿಯಾಗಿ ಉಳಿಯಲಿದ್ದಾರೆ. ಲೆಜೆಂಡ್‌ಗಳು ಶಾಶ್ವತವಾಗಿ ಇರ್ತಾರೆ” ಎಂದು ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಮಿತಾಭ್ ಬಚ್ಚನ್

“ಭಾರತೀಯ ಚಿತ್ರರಂಗದ ಇತಿಹಾಸವನ್ನು ಬರೆಯುವಾಗಲೆಲ್ಲಾ ‘ಬಿಫೋರ್ ದಿಲೀಪ್ ಕುಮಾರ್ – ಆಫ್ಟರ್ ದಿಲೀಪ್ ಕುಮಾರ್’ ಆಗಿರಬೇಕು” ಎಂದು ಹೇಳಿದ್ದಾರೆ.

ಅಜಯ್ ದೇವಗನ್

“ದಿಗ್ಗಜ ನಟನೊಂದಿಗೆ ವೈಯಕ್ತಿಕವಾಗಿ, ವೇದಿಕೆಗಳಲ್ಲಿ ಕಳೆದ ಕ್ಷಣಗಳು ನೆನಪಿನಲ್ಲಿದೆ. ಅವರೊಂದು ಸಂಸ್ಥೆ, ಸಮಯಮೀರಿದ ನಟ. ಅವರ ಸಾವಿನ ಸುದ್ದಿ ಹೃದಯ ಛಿದ್ರಗೊಳಿಸಿದೆ” ಎಂದು ಸಂತಾಪ ಸೂಚಿಸಿದ್ದಾರೆ.

ಅಕ್ಷಯ್ ಕುಮಾರ್

”ಜಗತ್ತಿಗೆ ಅನೇಕರು ಹೀರೋಗಳು ಆಗಬಹುದು. ಆದರೆ, ನಮಗೆ ಅವರೇ ಹೀರೋ. ದಿಲೀಪ್ ಕುಮಾರ್ ಅವರ ಭಾರತೀಯ ಸಿನಿಮಾದ ಸಂಪೂರ್ಣ ಯುಗವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾರೆ. ಅವರ ಕುಟುಂಬಕ್ಕೆ ಈ ನೋವು ಭರಿಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

Tags: Bollywooddileep kumarKICCHA SUDEEPModi
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram