ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
ಈ ಪ್ರಕರಣದ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟದ ಕುರಿತು ಎಫ್ ಐಆರ್ ದಾಖಲಾಗಿತ್ತು. ಸದ್ಯ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಸಿಬಿಗೆ ವಹಿಸಿದೆ. ಈ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.
ಈ ರಾಮೇಶ್ವರಂ ಕೆಫೆ ಕಡಿಮೆ ಅವಧಿಯಲ್ಲಿ ದೊಡ್ಡ ಹೆಸರು ಮಾಡಿ ದೇಶಾದ್ಯಂತ ಬ್ರ್ಯಾಂಚ್ ಗಳನ್ನು ಹೊಂದಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್ ಫೇವರೆಟ್ ಕೂಡ ಆಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.