ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಬಾಂಬರ್ ಕುರಿತು ಮಾಹಿತಿ ನೀಡಿದವರಿಗೆ ಎನ್ ಐಎ ಈಗಾಗಲೇ 10 ಲಕ್ಷ ರೂ. ಬಹುಮಾನ ಘೋಷಿಸಿದೆ.
ಸದ್ಯ ವ್ಯಕ್ತಿಯೊಬ್ಬರು ಇಮ್ಯಾಜನರಿ ಭಾವಚಿತ್ರ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದಲ್ಲಿ ವ್ಯಕ್ತಿಯ ಅರ್ಧ ಮುಖ ಮಾತ್ರ ಕಂಡಿದೆ. ಹೀಗಾಗಿ ಅಧಿಕಾರಿಗಳ ತನಿಖೆಗೆ ಸಹಾಯವಾಗಲೆಂದು ಚಿತ್ರಗಾರರೊಬ್ಬರು ಬಾಂಬರ್ನ ಪೂರ್ತಿ ಮುಖದ ಇಮ್ಯಾಜಿನರಿ ಸ್ಕೆಚ್ ಇದಾಗಿದೆ. ಎನ್ ಐಎ ಬಿಡುಗಡೆ ಮಾಡಿದ ಸಿಸಿಟಿವಿ ಭಾವಚಿತ್ರವನ್ನು ಆಧಾರವಾಗಿಟ್ಟುಕೊಂಡು ಚಿತ್ರಗಾರ ಹರ್ಷ, ಮುಖವನ್ನು ಊಹಿಸಿಕೊಂಡು ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ವಿತೌಟ್ ಮಾಸ್ಕ್ ಟೋಪಿ ಕನ್ನಡಕ ಧರಿಸಿದ ರೀತಿ ಚಿತ್ರ ಬಿಡಿಸಿದ್ದಾರೆ. ಈ ಇಮ್ಯಾಜಿನರಿ ಸ್ಕೆಚ್ ತನಿಖೆಗೆ ಸಹಾಯವಾಗಬಹುದೆಂದು ಬೆಂಗಳೂರು ಪೊಲೀಸ್ ಮತ್ತು ಎನ್ಐಎಗೆ ಟ್ಯಾಗ್ ಮಾಡಿದ್ದಾರೆ.