ಬೊಮ್ಮಾಯಿ ಅವರೇ ಸಚಿವರ ಯಾತ್ರೆ ನಿಲ್ಲಿಸಿ.. ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ
ಅಕಾಲಿಕ ಮಳೆಗೆ ಕರುನಾಡು ಕಂಗಾಲಾಗಿದೆ. ರಾಜ್ಯದಲ್ಲಿ ಬಿಟ್ಟುಬಿಡಲೇ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಬಿಜೆಪಿದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ.
ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ.
ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದು ಒತ್ತಾಯಿಸಿದ್ದಾರೆ.
ಕರುನಾಡು ಕಂಗಾಲು
ಅಕಾಲಿಕ ಮಳೆಗೆ ಕರುನಾಡು ಕಂಗಾಲಾಗಿದೆ. ರಾಜ್ಯದಲ್ಲಿ ಬಿಟ್ಟುಬಿಡಲೇ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಸೂರ್ಯ ಕಳೆದುಹೋಗಿದ್ದಾನೇನೋ ಅನ್ನುವಂತೆ ಮಳೆರಾಯನ ಅಬ್ಬರಕ್ಕೆ ಸೂರ್ಯದೇವ ಮರೆಯಾಗಿದ್ದಾನೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ನಾನಾ ಅವಾಂತರಗಳನ್ನು ಸೃಷ್ಠಿಸಿದ್ದಾರೆ. ಸಾವಿರಾರೂ ಎಕರೆ ಬೆಳೆ ನೀರುಪಾಲಾಗಿದೆ. ನೂರಾರು ಕೆರೆಗಳು ಕೋಡಿ ಹೊಡೆದು ಸಾವಿರಾರು ಎಕರೆ ಜಮೀನುಗಳು ಜಲಮಯವಾಗಿದೆ.
ಇನ್ನು ಬಿಟ್ಟುಬಿಡದೇ ಸುರಿದ ಮಳೆಗೆ ಸಾಕಷ್ಟು ಗ್ರಾಮಗಳು ನಡುಗಡ್ಡೆಗಳಾಗಿದ್ದರೇ ಮನೆಗಳು ಕುಸಿದಿವೆ. ಮರಗಳು ಧರೆಗುರುಳಿವೆ.