Border dispute: ಗಡಿ ವಿವಾದವನನ್ನ ಕಾನೂನಿನ ಮೂಲಕವೇ ಬಗೆ ಹರಿಸಿಕೊಳ್ಳುತ್ತೇವೆ – ಸಿ ಎಂ ಬೊಮ್ಮಾಯಿ
ಗಡಿ ವಿವಾದವನ್ನು ಕಾನೂನಿನ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ, ಡಿಸೆಂಬರ್ 30ರಂದು ಸುಪ್ರೀಂಕೋರ್ಟ್ ನಲ್ಲಿ ಮಹಾರಾಷ್ಟ್ರ ಗಡಿ ವಿಚಾರದ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಗಡಿ ಮತ್ತು ಜಲ ರಕ್ಷಣಾ ಆಯೋಗದ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಜೊತೆ ಚರ್ಚಿಸಿದ್ದೇನೆ. ನಾಳೆ ದೆಹಲಿಯಲ್ಲಿ ರಾಜ್ಯ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರೊಂದಿಗೆ ಗಡಿ ರಕ್ಷಣೆ ಸಂಬಂಧ ಸಮಾಲೋಚಿಸಲಿದ್ದೇನೆ ಎಂದರು.
ಈಗಾಗಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ರಾಜ್ಯಗಳಿಂದ ವರದಿ ಪಡೆದ ಬಳಿಕ ಕರ್ನಾಟಕದಲ್ಲಿಯೂ ಮುಂದಿನ ದಿನಗಳಲ್ಲಿ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಹಲವು ಸಮುದಾಯಗಳಿಂದ ಮೀಸಲಾತಿಗೆ ಬೇಡಿಕೆ ಇದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾನೂನು ಮುಖಾಂತರವೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
Border dispute: Border disputes will be resolved through law – CM Bommai