BR Ambedkar : ಡಾ.ಅಂಬೇಡ್ಕರ್ ಪರಿನಿರ್ವಾಣ ದಿನದಂದು ರಾಷ್ಟ್ರಪತಿ, ಪ್ರಧಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಕೆ..
ಸಂವಿಧಾನ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರದ್ಧಾಂಜಲಿ ಸಲ್ಲಿಸಿದರು. ಸಂಸತ್ ಭವನದ ಸಂಕೀರ್ಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಇತರ ನಾಯಕರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಮಹಾಪರಿನಿರ್ವಾಣ ದಿವಸ್ನಂದು ನಾನು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರು ನಮ್ಮ ದೇಶಕ್ಕೆ ಮಾಡಿದ ಅನುಕರಣೀಯ ಸೇವೆಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿತು ಮತ್ತು ಭಾರತಕ್ಕೆ ಅಂತಹ ಸಮಗ್ರ ಸಂವಿಧಾನವನ್ನು ನೀಡಲು ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಬರೆದಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರು ಗೌರವ ಸಲ್ಲಿಸಿ ಮಾತನಾಡಿ, “ಬಾಬಾಸಾಹೇಬರು ಮಹಾನ್ ಸಮಾಜ ಸುಧಾರಕರು ಮತ್ತು ನ್ಯಾಯಶಾಸ್ತ್ರಜ್ಞರಾಗಿದ್ದರು, ಅವರು ಶೋಷಿತರ ಕಲ್ಯಾಣಕ್ಕಾಗಿ ಆಳವಾದ ಕಾಳಜಿಯನ್ನು ತೋರಿಸಿದರು ಮತ್ತು ಜಾತಿ ಅಡೆತಡೆಗಳು ಮತ್ತು ಅಸಮಾನತೆಗಳನ್ನು ಹೋಗಲಾಡಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡಿದರು. ಸಂವಿಧಾನ ರಚನೆಯಲ್ಲಿ ಅವರು ನೀಡಿದ ಮಹತ್ವದ ಕೊಡುಗೆಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ” ಎಂದರು.
BR Ambedkar : Tributes from President, Prime Minister on Dr. Ambedkar Parinirvana Day..