ಅಡಿಲೇಡ್ ಡೇ&ನೈಟ್ ಟೆಸ್ಟ್ ನಲ್ಲಿ ಭಾರತ ಹೀನಾಯ ಸೋಲು ಕಂಡಿದೆ. 2ನೇ ಟೆಸ್ಟ್ನ 3ನೇ ದಿನದ ಆಟದಲ್ಲಿ ಟೀಮ್ ಇಂಡಿಯಾ, ಆಟಗಾರರ ಕಳಪೆ ಆಟದ ಪ್ರದರ್ಶನದಿಂದಾಗಿ 175 ರನ್ಗಳಿಗೆ ಆಲೌಟಾಯಿತು. ಇಂದು 128/5 ರನ್ಗಳಿಂದ ಆಟ ಆರಂಭಿಸಿದ ಭಾರತ ತಂಡವು, 47 ರನ್ ಗಳಿಸುವಷ್ಟರಲ್ಲಿ ಉಳಿದ 5 ವಿಕೆಟ್ ಕಳೆದುಕೊಂಡಿತು. 18 ರನ್ಗಳ ಸುಲಭ ಗುರಿ ಬೆನ್ನತ್ತಿದ ಕಾಂಗರೂ ಪಡೆ ಕೇವಲ 3.2 ಓವರ್ಗಳಲ್ಲಿ 10 ವಿಕೆಟ್ಗಳಿಂದ ಪಂದ್ಯ ಗೆದ್ದಿತು. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿವೆ.
ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...








