Breaking News : ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಡೀಲ್…
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನ ಸೋಲಿಸಲು ರಾಜ್ಯ ಕಾಂಗ್ರೆಸ್ ನಾಯಕನಿಗೆ 500 ಕೋಟಿ ರೂಪಾಯಿ ಸುಪಾರಿ ನೀಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಸ್ಪೋಟಕ ವಿಷಯವನ್ನ ಬಹಿರಂಗಪಡಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಕರ್ನಾಟಕದ ಕಾಂಗ್ರೆಸ್ ನಾಯಕನೊಬ್ಬನ ಕರೆಸಿ ಮೂರು ಮೂರು ಬಾರಿ ಮೀಟಿಂಗ್ ನಡೆಸಿದ್ದಾರೆ. ಇಷ್ಟೇ ಅಲ್ಲ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅದರಲ್ಲೂ ಇತ್ತೀಚೆಗೆ ಕೆಸಿಆರ್ ಅವರನ್ನ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಭೇಟಿಯಾಗಿರುವ ಹಿನ್ನಲೆಯಲ್ಲಿ ಈ ವಿಷಯ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿದೆ.
ಈ ಕುರಿತು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಮಾತನಾಡಿ ನಾನು ಹೈದರಾಬಾದ್ ಹೋಗಿದ್ದು ನಿಜ. ತೆಲಂಗಾಣ ಸಿಎಂ ಕೆಸಿಆರ್ ಅವರನ್ನು ಭೇಟಿ ಆಗಿದ್ದು ನಿಜ. ಶಾಸಕ ಮಿತ್ರರೊಬ್ಬರ ಒತ್ತಾಯದಿಂದ ಸಿಎಂ ಭೇಟಿ ಆದೆ. ಆದರೆ ಯಾವುದೇ ಆಫರ್ ಬಗ್ಗೆ ಗೊತ್ತಿಲ್ಲ. ಕೆಸಿಆರ್ ಜೊತೆಗೆ ಯಾವುದೇ ರಾಜಕೀಯ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Breaking News : 500 crore deal to defeat Congress in Karnataka…