ಸೇತುವೆ ಕುಸಿತ- 27 ಮಂದಿ ಗಂಭೀರ
1 min read
ಸೇತುವೆ ಕುಸಿತ- 27 ಮಂದಿ ಗಂಭೀರ Saaksha Tv
ಶ್ರೀನಗರ: ನಿರ್ಮಾಣ ಹಂತದ ಸೇತುವೆ ಕುಸಿದು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಸಾಂಬಾ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯಿಂದ ಕಬ್ಬಿಣದ ಕಟ್ಟು, ಹಲಗೆಗಳು ಕುಸಿದು ಬಿದ್ದಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (GMC) ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ
ರಾಮಗಡ-ಕೌಲ್ಪುರದಲ್ಲಿ ದೇವಿಕಾ ನದಿಯ ಮೇಲೆ ಗಡಿ ರಸ್ತೆಗಳ ಸಂಸ್ಥೆ (BRO) ಪ್ರಮುಖ ಸೇತುವೆಯನ್ನು ಕಾಮಗಾರಿ ಆಗುತ್ತಿತ್ತು. ಕಾಂಕ್ರೀಟ್ ಸ್ಲ್ಯಾಬ್ ಹಾಕುವ ವೇಳೆ ಕಬ್ಬಿಣದ ಶೆಟರ್ ಕುಸಿದಿದೆ. ಈ ಅವಘಡ ಸಂಭವಿಸಿದಾಗ ಅಲ್ಲೇ ಇದ್ದ ಕಾರ್ಮಿಕರು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದರು. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.