ಬ್ರಿಟನ್ – ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ ಮನೆ ಕ್ವಾರಂಟೈನ್ ನಿಂದ ವಿನಾಯಿತಿ – ಹಳದಿ ಪಟ್ಟಿಗೆ ಭಾರತ
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದಿರುವ ಭಾರತದ ಪ್ರಯಾಣಿಕರು ಬ್ರಿಟನ್ನಲ್ಲಿ 10 ದಿನಗಳ ಕಾಲ ಹೋಟೆಲ್ ಕ್ವಾರಂಟೈನ್ನಲ್ಲಿ ಇರಬೇಕಾದ ಅಗತ್ಯವಿಲ್ಲ. ಅದರ ಬದಲಿಗೆ ಅವರು 10 ದಿನಗಳ ಕಾಲ ಮನೆ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ ಎಂದು ಅಲ್ಲಿನ ಸರ್ಕಾರ ಹೊಸ ಮಾರ್ಗಸಸೂಚಿ ಬಿಡುಗಡೆ ಮಾಡಿದೆ.
ಬ್ರಿಟನ್ ಈ ಹಿಂದೆ ಕೆಂಪು ಪಟ್ಟಿಯಲ್ಲಿ ಗುರುತಿಸಿದ್ದ ಭಾರತ, ಯುಎಇ, ಕತಾರ್, ಬಹ್ರೇನ್ ದೇಶಗಳನ್ನು ಹಳದಿ ಪಟ್ಟಿಗೆ ಸೇರಿಸಿದೆ. ಈ ಬದಲಾವಣೆ ಇದೇ 8ರಿಂದ ಜಾರಿಗೆ ಬರಲಿದೆ ಎಂದು ಬ್ರಿಟನ್ ಸಾರಿಗೆ ಕಾರ್ಯದರ್ಶಿ ಗ್ರಾಂಟ್ ಶಾಪ್ಸ್ ಟ್ವೀಟ್ ಮಾಡಿದ್ದಾರೆ.
ಹಳದಿ ಪಟ್ಟಿಯಲ್ಲಿ ಬರುವ ದೇಶಗಳ ಪ್ರಯಾಣಿಕರು ತಮ್ಮ ದೇಶದ ನಿರ್ಗಮನಕ್ಕೂ ಮೂರು ದಿನಗಳ ಮೊದಲು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿರಬೇಕು. ಬ್ರಿಟನ್ಗೆ ಬಂದ ಮೇಲೆ ಎರಡು ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕಾಗುತ್ತದೆ ಎಂಬ ನಿಯಮಗಳಿವೆ. 18 ವರ್ಷದೊಳಗಿನವರು ಮತ್ತು ಬ್ರಿಟನ್ನಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರಿಗೆ ಮನೆ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಅದೇ ರೀತಿಯ ವಿನಾಯಿತಿ ಯುರೋಪಿಯನ್ ಒಕ್ಕೂಟ ಮತ್ತು ಅಮೆರಿಕದಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದವರಿಗೂ ಇದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.