ರಾಜೀನಾಮೆ ನಿರ್ಧಾರ ಖಚಿತಪಡಿಸಿದ ಬಿ.ಎಸ್.ಯಡಿಯೂರಪ್ಪ BS Yeddyurappa saaksha tv
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಎರಡು ತಿಂಗಳ ಹಿಂದೆಯೇ ನಿರ್ಧಾರ ಮಾಡಿದ್ದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಎರಡು ತಿಂಗಳ ಹಿಂದೆಯೇ ನಿರ್ಧಾರ ಮಾಡಿದ್ದೆ. ಹೈಕಮಾಂಡ್ ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ.
ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾರ ಸೂಚನೆಯನ್ನು ಪಾಲಿಸುತ್ತೇನೆ. ಹೈಕಮಾಂಡ್ ಹೇಳುವವರೆಗೆ ನಾನು ಸಿಎಂ ಆಗಿ ಮುಂದುವರಿಸುತ್ತೇನೆ. ಇದುವರೆಗೆ ಯಾವುದೇ ಸಂದೇಶ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೇ ಅಧಿಕಾರ ಇಲ್ಲದೇ ಇದ್ದರೂ ಪಕ್ಷ ಸಂಘಟನೆಗೆ ನಾನು ದುಡಿಯುತ್ತೇನೆ ಎಂದು ತಿಳಿಸಿದ ಬಿ.ಎಸ್.ಯಡಿಯೂರಪ್ಪ, ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದರು. ಆ ಮೂಲಕ ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವಿಚಾರಕ್ಕೆ ಸ್ಪಷ್ಟ ಚಿತ್ರಣ ಸಿಕ್ಕಿದೆ.