ಶಾಲೆ ಆರಂಭಕ್ಕೂ ಮುನ್ನ ಫೀಸ್ ಕಟ್ಟುವಂತೆ ಒತ್ತಾಯಿಸಿದ್ರೆ ಕ್ರಮ : ಬಿ.ಎಸ್.ವೈ
ಹಾಸನ : ತರಗತಿಗಳ ಆರಂಭಕ್ಕೂ ಮುನ್ನ ಫೀಸ್ ಕಟ್ಟುವಂತೆ ಒತ್ತಾಯಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಇಂದು ಹಾಸನಕ್ಕೆ ಭೇಟಿ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಸನದ ಜಿ.ಪಂ. ಹೊಯ್ಸಳ ಸಭಾಂಗಣದಲ್ಲಿ ಕೋವಿಡ್-19 ಹಾಗೂ ಇತರೆ ಅಭಿವೃದ್ಧಿ ವಿಷಯಗಳು ಕುರಿತು ಪರಿಶೀಲನಾ ಸಭೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹಾಸನದಲ್ಲಿ ಮೊದಲ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದೇನೆ. ನಾಳೆ ಶಿವಮೊಗ್ಗದಲ್ಲಿ ಸಭೆ ನಡೆಸುತ್ತೇನೆ.
ಜಿಲ್ಲೆಯ ಶಾಸಕರು ಅನೇಕ ವಿಷಯಗಳು ಬಗ್ಗೆ ಚರ್ಚಿಸಿದ್ದಾರೆ, ಸಲಹೆ ಕೊಟ್ಟಿದ್ದಾರೆ. ಶಾಲೆಗಳ ಆರಂಭಕ್ಕೂ ಮುನ್ನ ಫೀಸ್ ಕಟ್ಟುವಂತೆ ಯಾವ ಖಾಸಗಿ ಶಾಲೆಯವರು ಒತ್ತಾಯ ಮಾಡಬಾರದು.
ಫೀಸ್ ಕಟ್ಟುವಂತೆ ಒತ್ತಾಯ ಮಾಡುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಸಭೆಯಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಎಚ್.ಡಿ.ರೇವಣ್ಣ,
ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ಎ.ಟಿ.ರಾಮಸ್ವಾಮಿ, ಪ್ರೀತಂಗೌಡ, ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ಎಂಎಲ್ ಸಿ ಎಂ.ಎ.ಗೋಪಾಲಸ್ವಾಮಿ, ಡಿಸಿ, ಎಸ್ಪಿ, ಡಿಎಸ್ ಪಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.