ಇನ್ನೂ 20ವರ್ಷವಾದರೂ ಬಿಜೆಪಿ ಬಿಟ್ಟು ಯಾರು ಗೆಲ್ಲೋಲ್ಲ : ಬಿಎಸ್ ವೈ
ಬಾಗಲಕೋಟೆ : ಇನ್ನೂ 20ವರ್ಷವಾದರೂ ಬಿಜೆಪಿ ಬಿಟ್ಟು ಯಾರು ಗೆಲ್ಲೋದಕ್ಕೆ ಆಗೋಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣೆ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದ್ದಾರೆ ಎಂಬ ಆರೋಪಕ್ಕೆ ಬಾಗಲಕೋಟೆಯಲ್ಲಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ 20ವರ್ಷವಾದರೂ ಬಿಜೆಪಿ ಬಿಟ್ಟು ಯಾರು ಗೆಲ್ಲೋದಕ್ಕೆ ಆಗೋಲ್ಲ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಬಹುಮತ ಪಡೆಯಲು ಮೋದಿಯವರ ಹೆಸರೆ ಸಾಕು. ಜನ ಸ್ವರಾಜ್ ಸಮಾವೇಶ ಮುಗಿದ ಬಳಿಕ ನಾನು ಮತ್ತೊಮ್ಮೆ ರಾಜ್ಯಾದ್ಯಂತ ಪ್ರವಾಸ ಮಾಡುವೆ. ಬಿಜೆಪಿ 140ಸೀಟು ಗೆಲ್ಲಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಕಾನೂನು ವಾಪಸ್ ಪಡೆದ ಬಗ್ಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಸ್ವಲ್ಪ ತಡವಾದರೂ ಈ ದೃಢ ನಿರ್ಧಾರ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದಿದ್ದಾರೆ.