ಯಡಿಯೂರಪ್ಪ ಅವರಿಗೆ ಹಿಂಬಾಗಿಲಿನಿಂದ ಬಂದು ರೂಢಿ – ಸಿದ್ದರಾಮಯ್ಯ
ಬೆಳಗಾವಿ: ಯಡಿಯೂರಪ್ಪ ಅವರಿಗೆ ಹಿಂಬಾಗಿಲಿನಿಂದ ಬಂದು ರೂಢಿ. 2008ರಲ್ಲೂ, ಈಗಲೂ ಅವರು ಹಿಂಬಾಗಿಲಿನಿಂದಲೇ ಬಂದಿದ್ದು. ಆಗ 110, ಈಗ 104 ಸ್ಥಾನ ಗೆದ್ದಿದ್ದಾರೆ. ಆಪರೇಷನ ಕಮಲ ಹೆಸರು ಬಂದಿದ್ದು ಮಿಸ್ಟರ್ ಯಡಿಯೂರಪ್ಪ ಅವರಿಂದಲೇ. ಯಡಿಯೂರಪ್ಪ ಎರಡು ಬಾರಿ ಆಪರೇಷನ್ ಕಮಲ ಮಾಡಿದರು. 500 ಕೋಟಿ ಖರ್ಚು ಮಾಡಿದರು. ಎಲ್ಲಿಂದ ಬಂತು ಹಣ. ಅವರ ಮನೆಯಿಂದ ಹಣ ಬಂತಾ ಎಂದು ಮಾಜಿ ಸಿಎಂ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿರುವ ಅವರು ಸಿಎಂ ಚೆಕ್ ಮುಖಾಂತರ ಲಂಚ ತೆಗೆದುಕೊಳ್ಳುತ್ತಾರೆ. ಅವರ ಮಗ ಆರ್ಟಿÁಜಿಎಸ್ ನಿಂದ ಹಣ ತೆಗೆದುಕೊಳ್ಳುತ್ತಾರೆ. ಇದನ್ನು ನಾನು ಅವರ ಮುಖದ ಮೇಲೆಯೇ ಹೇಳಿದ್ದೇನೆ. ನನ್ನ ಅಧಿಕಾರದಲ್ಲಿ ಒಂದು ಚೆಕ್ ಬೌನ್ಸ್ ಆಗಿಲ್ಲ. ಯಡಿಯೂರಪ್ಪ ಬಂದ ಮೇಲೆ ಖಜಾನೆ ಖಾಲಿ. ಖಜಾನೆ ಯಾಕೆ ಖಾಲಿ ಆಯ್ತು ಎಂದು ಕೇಳಿದರೆ ಕೊರೊನಾ ಅಂತಾರೆ. ಇದೇ ಯಡಿಯೂರಪ್ಪ ಅವರ 2018 ರ ಪ್ರಣಾಳಿಕೆ ತೆಗೆದು ನೋಡಿ. ರೈತರ ಸಾಲ ಮನ್ನಾ ಅಂದಿದ್ರು, ಹಿಂದೆ ಆಗಲಿ ಈಗ ಆಗಲಿ ಸಾಲಮನ್ನಾ ಮಾಡಿದ್ದಾರಾ ಎಂದು ಸಿಎಂ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಕನಸಷ್ಟೆ