ಬೆಂಗಳೂರು: ಕೊರೊನಾ ತಡೆಗೆ ದೇಶಾದ್ಯಂತ ಮಾಡಲಾಗಿದ್ದ ಲಾಕ್ಡೌನ್ ಹಾಗೂ ಅನ್ಲಾಕ್ ಅಗಿ ಬಹಳ ದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜಭವನಕ್ಕೆ ಭೇಟಿ ನೀಡಿದ್ದರು.
ಬೆಳಿಗ್ಗೆ 11.30ಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ರಾಜ್ಯದ ಸದ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.
ಕೊರೊನಾ ನಿಯಂತ್ರಣಕ್ಕೆ ಮಾಡಲಾಗಿದ್ದ ಲಾಕ್ಡೌನ್ ತೆರವು ಮಾಡಲಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ ಎಂದು ಬಿಎಸ್ವೈ ನಿನ್ನೆ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಹಾಗೂ ಲಾಕ್ಡೌನ್ ತೆರವಾದ ನಂತರ ಸರ್ಕಾರ ಪ್ರಕಟಿಸಿದ ಪರಿಹಾರ ಪ್ಯಾಕೇಜ್ಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ
fifa worldcup2026-ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು
ಸಿಆರ್ & ಎಲ್ಎಂ..! ವಿಶ್ವ ಫುಟ್ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...








