ಇತಿಹಾಸದಲ್ಲೇ ಮೊದಲ ಬಾರಿಗೆ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್ ಮಂಡನೆ
ಬೆಂಗಳೂರು : ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್ ಮಂಡಿಸಿದ್ದೇವೆ. ಎಲ್ಲ ವಲಯ, ಜಿಲ್ಲೆಗಳಿಗೆ ವಿಶೇಷ ಕಾರ್ಯಕ್ರಮ ನೀಡಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದ್ದೇನೆ. ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್ ಇದಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಕೂಲ ಸ್ಥಿತಿಯಲ್ಲೂ ಸರ್ವ ವ್ಯಾಪಿ, ಸರ್ವ ಸ್ವರೂಪಿ ಬಜೆಟ್ ನಿರ್ಮಿಸಲು ಪ್ರಯತ್ನಿಸಿದ್ದೇವೆ. ಈ ವರ್ಷದ ಬಜೆಟ್ ಗಾತ್ರ ಶೇ.3 ಕ್ಕಿಂತ ಹೆಚ್ಚಳವಾಗಿದೆ. ಇದೊಂದು ಜನಸ್ನೇಹಿ ಬಜೆಟ್ ಎಂದು ಬಣ್ಣಿಸಿದ್ರು.
ಇನ್ನು ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್ ಮಂಡಿಸಿದ್ದೇವೆ. ಎಲ್ಲ ವಲಯ, ಜಿಲ್ಲೆಗಳಿಗೆ ವಿಶೇಷ ಕಾರ್ಯಕ್ರಮ ನೀಡಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದ್ದೇನೆ. ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್ ಎಂದು ಪುನರುಚ್ಚರಿಸಿದ್ರು.
ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ ಕಲ್ಪಿಸಿದ್ದೇವೆ. ದೇಶ ಕಟ್ಟುವ ಕಾಯಕಕ್ಕೆ ಈ ಮೂಲಕ ಸಾಥ್ ನೀಡಿದ್ದೇವೆ. ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್, ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ ಮತ್ತು ಕಷ್ಟದ ಸಮಯದಲ್ಲೂ ಸಂಬಳ, ಪಿಂಚಣಿ, ಸಬ್ಸಿಡಿ ಸಕಾಲದಲ್ಲಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.