ಎತ್ತಿನಬಂಡಿಗೆ ಲಾರಿ ಡಿಕ್ಕಿ : ಚಾಲಕ, ಎತ್ತುಗಳು ಸಾವು bull-cart-truck-accident in haveri saaksha tv
ಹಾವೇರಿ : ಎತ್ತಿನಬಂದಿಗೆ ಲಾರಿ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಮತ್ತು ಎತ್ತುಗಳು ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ.
33 ವರ್ಷದ ಮೂರ್ತಿ ಲಮಾಣಿ ಮೃತ ದುರ್ದೈವಿ. ಈತ ವಿಜಯನಗರದ ಕೊಟ್ಟೂರು ತಾಲೂಕಿನ ಧೊಪದಹಳ್ಳಿ ತಾಂಡಾದ ನಿವಾಸಿ ಎಂದು ತಿಳಿದುಬಂದಿದೆ.
ಸಂಗೂರು ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿ ವಾಪಸ್ ಬರುತ್ತಿದ್ದ ವೇಳೆ ಎತ್ತಿನಬಂದಿಗೆ ಲಾರಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಎತ್ತುಗಳು ಸೇರಿದಂತೆ ಒಬ್ಬ ಮೃತಪಟ್ಟಿದ್ದಾರೆ. ಇನ್ನು ಎತ್ತಿನಬಂಡಿಯಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಂತರ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.