ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗಳಿಗೆ ಬಂಪರ್ ಸುದ್ದಿ ನೀಡಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಂದಿನಿಂದಲೇ ಈ ಸೇವೆ ಸಿಗಲಿದೆ ಎಂದು ಹೇಳಿದ್ದಾರೆ.
ಪೋಷಕರು ಹೆಚ್ಚಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಕಲಿತರೇ ಮೇದಾವಿಗಳಾಗಲ್ಲ, ಸಾಧಾನೆ ಮಾಡಲು ಸಾಧ್ಯವಿಲ್ಲ ಎಂಬ ತಪ್ಪು ಕಲ್ಪನೆ ಪೋಷಕರಲ್ಲಿ ಮೂಡಿದೆ. ನಮ್ಮ ಪ್ರಯತ್ನಗಳಿಗೆ ನ್ಯಾಯಾಲಯ ಸಹ ಸಹಕಾರ ನೀಡುತ್ತಿಲ್ಲ. ನ್ಯಾಯಾಲಯ ಕೂಡಾ ಪೋಷಕರು ಇಚ್ಛಿಸುವ ಮಾಧ್ಯಮದಲ್ಲಿಯೇ ಮಕ್ಕಳು ಓದಬೇಕು ಎಂದು ಹೇಳಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸಬೇಕು.ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
ಕನ್ನಡ ನಮ್ಮ ಕಲಿಕೆ ಭಾಷೆ ಆಗಬೇಕು. ಇತ್ತೀಚೆಗೆ ಹೆಚ್ಚಿನ ಮಕ್ಕಳ ಖಾಸಗಿ ಶಾಲೆಗಳಲ್ಲಿ ವ್ಯಾಸಾಂಗ ಮಾಡಿಸುತ್ತಿರುವುದು ಅಪಾಯದ ಬೆಳವಣಿಗೆ. ಪೋಷಕರು ಖಾಸಗಿಯತ್ತ ಪೋಮುಖ ಮಾಡುತ್ತಿದ್ದಾರೆ ಎಂದು ಹೇಳಿದರು.








