ಬೈಕ್ ಗೆ ಬಸ್ ಡಿಕ್ಕಿ : ಇಬ್ಬರು ಸಾವು
ಶಿವಮೊಗ್ಗ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ಜಯಂತಿ, ಅಂಥೋಣಿ ಮೃತರಾಗಿದ್ದಾರೆ. ಇವರು ಶಿವಮೊಗ್ಗ ಕಡೆಯಿಂದ ಭದ್ರಾವತಿಯತ್ತ ಹೊರಟಿದ್ದರು.
ಈ ವೇಳೆ ಬೈಕ್ ಸವಾರರಿಗೆ ಭದ್ರಾವತಿ ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಇನ್ನ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.