ರಾಯಚೂರು: ತಡೆಗೋಡೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ(Raichur) ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಹತ್ತಿರ ನಡೆದಿದೆ. ಗ್ರಾಮದ ಹತ್ತಿರ ಇದ್ದ ಹಳ್ಳದ ಸೇತುವೆ ತಡೆಗೋಡೆಗೆ ಬಸ್(Bus) ಡಿಕ್ಕಿಯಾಗಿ ಹಲವರಿಗೆ ಗಾಯಗೊಂಡಿದ್ದಾರೆ.
ಮಾನ್ವಿ- ಸಿಂಧನೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದೆ. ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಸ್ ಇಳಿದಿದೆ. ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








