ಗದಗ: ಸೈಡ್ ಕೊಡುವಂತೆ ಬಸ್ ಚಾಲಕ, ಹಾರ್ನ್ ಹೊಡೆದಿದ್ದಕ್ಕೆ ಕಾರಿನಲ್ಲಿ ಹೊರಟಿದ್ದ ಪುಂಡರು ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ.
ಗದಗ ಜಿಲ್ಲೆಯ ಅಸುಂಡಿಯಲ್ಲಿ ಈ ಘಟನೆ ನಡೆದಿದ್ದು, ಗದಗನಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್ ನ ಚಾಲಕ ಸಂತೋಷ್, ಮುಂದೆ ಹೊರಟಿದ್ದ ಕಾರಿಗೆ ಸೈಡ್ ನೀಡುವಂತೆ ಹಾರ್ನ್ ಹೊಡೆದಿದ್ದಾರೆ. ಆದರೆ, ಕಾರಿನಲ್ಲಿದ್ದವರು ಏಕಾಏಕಿ ಬಸ್ ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸುವಂತೆ ಬಸ್ ನಲ್ಲಿದ್ದ ಸಾರ್ವಜನಿಕರು ಆಗ್ರಹಿಸಿದ್ದಾರೆ.