ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯ : ಲಕ್ಷ್ಮಣ್ ಸವದಿ ಹೇಳಿದ್ದೇನು..?
ಬೆಂಗಳೂರು : ಅರ್ಧವೇತನ ಪಾವತಿ,ಅಧಿಕಾರಿಗಳ ಕಿರುಕುಳ,ರಜೆಗಳ ಸಮಸ್ಯೆ ವಿರುದ್ಧ ರೋಸಿಹೋಗಿರೋ ಸಾರಿಗೆ ಸಿಬ್ಬಂದಿ, ಮತ್ತೆ ನಾಳೆ ಪ್ರತಿಭಟನೆಯ ಹಾದಿ ತುಳಿಯಲಿದ್ದಾರೆ.
ನಾಳೆ ಮಧ್ಯಾಹ್ನ 1 ಗಂಟೆ ಬಿಎಂಟಿಸಿ ಕೇಂದ್ರ ಕಚೇರಿ ಬಳಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ದು, ಸಾರಿಗೆ ನೌಕರರ ವೇತನ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಅವರ ವೇತನದಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ.
ನಾಳೆ ಬಸ್ ಸಂಚಾರದಲ್ಲಿಯೂ ವ್ಯತ್ಯಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಳೆ ಸಾರಿಕೆ ಸಿಬ್ಬಂದಿ ಪ್ರತಿಭಟನೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡುತ್ತಾ, ಕೊರೊನಾದಿಂದಾಗಿ ರಾಜ್ಯದ ಆರ್ಥಿಕತೆಗೆ ಹೊಡೆತ ಬಿದ್ದಿದೆ. ಇದರಿಂದಾಗಿ ವೇತನದಲ್ಲಿ ಕೊಂಚ ಏರುಪೇರಾಗಿತ್ತು.
ಈಗ ಸಾರಿಗೆ ನೌಕರರ ವೇತನವನ್ನು ನೀಡಲಾಗುವುದು. ಡಿಸೆಂಬರ್ ನಲ್ಲಿ ನೌಕರರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು.
ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಪರಮಾರ್ಶೆ ಮಾಡುತ್ತಿದೆ. ಕೆಲವು ಕಾರ್ಯಸಾಧು ಬೇಡಿಕೆಗಳನ್ನು ಈಡೇರಿಸಿದೆ. ಉಳಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಿದೆ ಎಂದು ಮಾಹಿತಿ ನೀಡಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇದೇ ವೇಳೆ ನಾಳೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ ಸಚಿವರು, ಬಿಎಂಟಿಸಿ ಕೇಂದ್ರ ಕಚೇರಿ ಎದುರು ನೌಕರರು ಸಾಂಕೇತಿಕವಾಗಿ ಧರಣಿ ಮಾಡುತ್ತಾರೆ. ಬಸ್ ಸಂಚಾರ ಎಂದಿನಂತೆ ಇರುತ್ತದೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel