ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉಪಚುನಾವಣೆ | ಕೇಸರಿ ಪಡೆ ಘರ್ಜನೆ.. ಕಮಕ್ ಕಿಮಕ್ ಎನ್ನದ ಕಾಂಗ್ರೆಸ್

Mahesh M Dhandu by Mahesh M Dhandu
November 11, 2020
in Newsbeat, Politics, ರಾಜಕೀಯ
Congress

Congress

Share on FacebookShare on TwitterShare on WhatsappShare on Telegram

ಉಪಚುನಾವಣೆ | ಕೇಸರಿ ಪಡೆ ಘರ್ಜನೆ.. ಕಮಕ್ ಕಿಮಕ್ ಎನ್ನದ ಕಾಂಗ್ರೆಸ್

ನವದೆಹಲಿ : ಮಂಗಳವಾರ ದೇಶದ 11 ರಾಜ್ಯಗಳ 59 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಘರ್ಜಿಸಿದೆ. 59 ಸ್ಥಾನಗಳ ಪೈಕಿ ಬರೋಬ್ಬರಿ 41 ಸ್ಥಾನಗಳಲ್ಲಿ ಕೇಸರಿ ಪಡೆ ಜಯಭೇರಿ ಬಾರಿಸಿದೆ.

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ಅದರಲ್ಲೂ ಕಾಂಗ್ರೆಸ್ ಪಕ್ಷದ ಅಧೀನದಲ್ಲಿದ್ದ 31 ಕ್ಷೇತ್ರಗಳನ್ನು ಈ ಉಪಚುನಾವಣೆಯಲ್ಲಿ ಬಿಜೆಪಿ ಕಿತ್ತುಕೊಂಡಿದೆ. ಮುಖ್ಯವಾಗಿ ಮಧ್ಯಪ್ರದೇಶ ಮತ್ತು ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷದ 26 ಸ್ಥಾನಗಳನ್ನು ಕೇಸರಿ ಪಡೆ ವಶಕ್ಕೆ ಪಡೆದಿದೆ.

By-election BJP

ಗಜರಾತ್ ನಲ್ಲಿ ಎಂಟು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದರಲ್ಲಿ ಸೌರಾಷ್ಟ್ರ ಭಾಗದ ಐದು ಕ್ಷೇತ್ರಗಳು ಹಾಗೂ ಬುಡಕಟ್ಟು ಜನಾಂಗದ ಪ್ರಾಬಲ್ಯ ಇರುವ ದಂಗ್ ಕ್ಷೇತ್ರ ಸೇರಿವೆ.

ಇತ್ತ ಮಧ್ಯಪ್ರದೇಶದಲ್ಲಿ 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, 19 ಕ್ಷೇತ್ರಗಳಲ್ಲಿ ಬಿಜೆಪಿ ಗೆದಿದೆ. ಕಾಂಗ್ರೆಸ್ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದು, 18 ಸ್ಥಾನಗಳನ್ನು ಕಳೆದುಕೊಂಡಿದೆ.

`ಕೈ’ ಭದ್ರಕೋಟೆಯಲ್ಲಿ ಕಮಲ ಕಲವರ

ಕೇವಲ ಗುಜರಾತ್, ಮಧ್ಯಪ್ರದೇಶ ಮಾತ್ರವಲ್ಲದೇ ಕಾಂಗ್ರೆಸ್ ನ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಮಣಿಪುರದಲ್ಲೂ ಬಿಜೆಪಿ ಗೆದ್ದು ಇತಿಹಾಸ ನಿರ್ಮಿಸಿದೆ.

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು: ಅಭಿವೃದ್ಧಿ ಕಾರ್ಯಗಳಿಗೆ ಸಿಕ್ಕ ಜನಮನ್ನಣೆ-ಸಚಿವ ರಮೇಶ್ ಜಾರಕಿಹೊಳಿ

ಐದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರಗಳಲ್ಲಿ ಗೆದ್ದರೇ ಕಾಂಗ್ರೆಸ್ ವಶದಲ್ಲಿದ್ದ ಮತ್ತೊಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ. ಆ ಮೂಲಕ ಮಣಿಪುರದಲ್ಲೂ ಕಾಂಗ್ರೆಸ್ ಕಂಗಾಲಾಗಿದೆ.

ಇನ್ನು ಉತ್ತರ ಪ್ರದೇಶಕ್ಕೆ ಬಂದ್ರೆ ಏಳು ಸ್ಥಾನಗಳ ಪೈಕಿ ಆರು ಬಿಜೆಪಿ ಪಾಲಾಗಿದ್ದರೆ, ಒಂದು ಸ್ಥಾನದಲ್ಲಿ ಸಮಾಜವಾದಿ ಪಕ್ಷ ಗೆಲುವಿನ ನಗೆ ಬೀರಿದೆ.

By-election BJP

ಕರ್ನಾಟಕದಲ್ಲಿ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲೂ ಬಿಜೆಪಿ ಜಯ ಸಾಧಿಸಿದೆ.

ಇತರ ಆರು ರಾಜ್ಯಗಳ 9 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಿಂಹಪಾಲು ಪಡೆದುಕೊಂಡಿದೆ.

ಬೈ ಎಲೆಕ್ಷನ್ ಗೆದ್ದಾಯ್ತು, ಈಗ ಕ್ಯಾಬಿನೆಟ್ ಟೆನ್ಶನ್: ಕೊಟ್ಟ ಮಾತು ಉಳಿಸಿಕೊಳ್ತಾರ `ರಾಜಾಹುಲಿ’

ಒಟ್ಟಾರೆ ದೇಶದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದರೇ ಬಿಜೆಪಿ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತ ಎದುರಾಳಿಗಳಿಗೆ ಭಯ ಹುಟ್ಟಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPby electionCongress
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram