ಮಂಗಳೂರು : ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈ ಎಲೆಕ್ಷನ್ ನಲ್ಲಿ ಗೆಲುವು ಸಾಧಿಸದೇ ಡಿ.ಕೆ.ಶಿವಕುಮಾರ್ ಸಹೋದರರು ವಿರಮಿಸಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಬೈ ಎಲೆಕ್ಷನ್ ಗಳ ಬಗ್ಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ಚುನಾವಣೆಗೆ ಖರ್ಚು ಮಾಡಲು ಸಾಧ್ಯವಿರುವ ವ್ಯಕ್ತಿ.
ಹೀಗಾಗಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸದೇ ಡಿಕೆ ಶಿವಕುಮಾರ್ ಸೋದರರು ವಿರಮಿಸಲ್ಲ.
ಇದನ್ನೂ ಓದಿ : ಶಿರಾದಲ್ಲಿ ಬಿಜೆಪಿ ಅಲೆ ಅಂದವರು ಹುಚ್ಚಾಸ್ಪತ್ರೆಯಿಂದ ಬಂದವರು : ಕೆ.ಎನ್.ರಾಜಣ್ಣ
ಚುನಾವಣೆಗೆ ಖರ್ಚು ಮಾಡಲು ಸಾಧ್ಯ ಇರುವ ವ್ಯಕ್ತಿ ಅಂದ್ರೆ ಡಿಕೆಶಿ. ಖರ್ಚು ಮಾಡುವಷ್ಟು ಹಣ ಡಿಕೆಶಿ ಅವರಲ್ಲಿದೆ ಎಂದರು.
ಡಿ.ಕೆ. ಶಿವಕುಮಾರ್ ಚುನಾವಣೆಯಲ್ಲಿ ಗೆಲುವು ಸಿಗುವವರೆಗೆ ಅವರು ನಿದ್ದೆ ಮಾಡಲ್ಲ. ಅವರೊಂದಿಗೆ ಡಿಕೆ ಸುರೇಶ್ ಮತ್ತು ಅವರ ತಾಯಿ ಕೂಡ ನಿದ್ದೆ ಮಾಡಲ್ಲ.
ಅವರ ತಾಯಿ ಮಕ್ಕಳನ್ನ ಗೆಲ್ಲಿಸದೇ ಬಿಡೋದೇ ಇಲ್ಲ. ಅವರೇ ನಿಂತು ಈ ಚುನಾವಣೆ ಗೆಲ್ಲಿಸ್ತಾರೆ ಅನ್ನೋ ವಿಶ್ವಾಸ ಇದೆ ಎಂದು ಹೇಳಿದರು.
ಈ ಉಪಚುನಾವಣೆಗಳಿಗೆ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ.
ಆರ್ ಆರ್ ನಗರದಲ್ಲಿ ಕಾಂಗ್ರೆಸ್ಸಿ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದಾರೆ.
ಇದನ್ನೂ ಓದಿ : ಹುಲಿ ಕಾಡು ಪ್ರಾಣಿ, ಅದು ಕಾಡಿಗೆ ಹೋಗಬೇಕು : ಸಿದ್ದುಗೆ ಕಟೀಲ್ ಗುದ್ದು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel