ಬೈ ಎಲೆಕ್ಷನ್ (By Election) : ಸತೀಶ್ ಜಾರಕಿಹೊಳಿಗೆ ಬೆಳಗಾವಿ ಟಿಕೆಟ್ ಪಕ್ಕಾ..!!
ಬೆಂಗಳೂರು : ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಉಪಚುನಾವಣೆ ಹಿನ್ನಲೆ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಯಿತು.
ಈ ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಣಕ್ಕಿಳಿಯಲು ಸತೀಶ್ ಜಾರಕಿಹೊಳಿ ಒಪ್ಪಿಗೆ ಸೂಚಿಸಿದ್ದಾರಂತೆ. ಈ ಸಂಬಂಧ ನಾಳೆ ಸಂಜೆ ಎಐಸಿಸಿಯಿಂದ ಅಧಿಕೃತ ಪ್ರಕಟನೆ ಹೊರಬೀಳಲಿದೆ.
ಇದೇ ವೇಳೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಲಾಗಿದೆ.
ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಜವಾಬ್ದಾರಿ ನೀಡಲಾಗಿದೆ.
ಬಸವಕಲ್ಯಾಣಕ್ಕೆ ಈಶ್ವರ್ ಖಂಡ್ರೆಗೆ ಉಸ್ತುವಾರಿಯಾಗಿದ್ದರೇ ಮಸ್ಕಿ ಕ್ಷೇತ್ರಕ್ಕೆ ಧೃವನಾರಾಯಣ್ ಗೆ ಇನ್ ಚಾರ್ಜ್ ಆಗಿದ್ದಾರೆ.