BJP MLC ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಮಾತಿನಿಂದ ಕೆಟ್ಟದಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ‘ಹಾಗೆ ಅಂದಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ’ ಎಂದು ಹೆಬ್ಬಾಳ್ಳರ್ ಸವಾಲ್ ಹಾಕಿದ್ದರು. ಇದಕ್ಕೆ ಉತ್ತರ ನೀಡಿರುವ ಸಿಟಿ ರವಿ, ‘ದೂರು ಕೊಟ್ಟು, ಪೊಲೀಸ್ ದೌರ್ಜನ್ಯ ಮಾಡಿ, ಈಗ ಧರ್ಮಸ್ಥಳಕ್ಕೆ ಕರೆಯುತ್ತಾ ಇದ್ದಾರೆ. ಕಾಲ ಮೀರಿ ಹೋಗಿದೆ. ಇನ್ನೇನಿದ್ದರೂ ನ್ಯಾಯಾಲಯದ ತೀರ್ಪು ಬಂದ ಮೇಲೆ ಪ್ರತಿಕ್ರಿಯಿಸುವೆ’ ಎಂದು ತಿರುಗೇಟು ನೀಡಿದ್ದಾರೆ.
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...








