ಕೊರೊನಾ ಭೀತಿಯಿಂದ ನಾಳೆ ನಡೆಯುವ ಕ್ಯಾಬಿನೆಟ್ ಸಭೆ ಸ್ಥಳಾಂತರ ಆಗಿದೆ. ಕೊರೊನಾ ಹರಡುವಿಕೆ ಹೆಚ್ಚಾಗಿದೆ. ಆ ಕಾರಣಕ್ಕಾಗಿ ನಾಳೆ ನಡೆಯುವ ಕ್ಯಾಬಿನೆಟ್ ಮೀಟಿಂಗ್ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ನಿರ್ಧಾರ ಮಾಡಿದೆ. ಇಷ್ಟು ದಿನ ವಿಧಾನಸೌಧದಲ್ಲಿರುವ ಕ್ಯಾಬಿನೆಟ್ ಹಾಲ್ ನಲ್ಲಿ ಸಭೆ ನಡೆಯುತ್ತಿತ್ತು. ಇದೀಗ ಸಚಿವರು ಸಹ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮುಂದಾಗಿದ್ದಾರೆ. ಕ್ಯಾಬಿನೆಟ್ ಹಾಲ್ ನಲ್ಲಿ ಎಲ್ಲಾ ಸಚಿವರು ಅಂತರ ಕಾಪಾಡಿಕೊಳ್ಳಲು ಆಗುವುದಿಲ್ಲ ಎಂಬ ಕಾರಣಕ್ಕೆ ಸಭೆಯನ್ನು ಸಭಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ. ವಿಧಾನಸೌಧದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದೆ. ನಿನ್ನೆಯಷ್ಟೇ ಕೇಂದ್ರ ಸಚಿವ ಸಂಪುಟ ಸಭೆ ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆದಿತ್ತು. ಹಾಗಾಗಿ ರಾಜ್ಯ ಸಚಿವ ಸಂಪುಟ ಈ ತೀರ್ಮಾನ ಮಾಡಿದೆ ಎನ್ನಲಾಗಿದೆ. ಹಾಗಾಗಿ ಸಭಾಂಗಣದಲ್ಲಿ ಎರಡರಿಂದ ಮೂರು ಅಡಿ ಅಂತರದಲ್ಲಿ ಕುರ್ಚಿ ಹಾಕಲಾಗುತ್ತದೆ ಎನ್ನಲಾಗಿದೆ.
ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!
ನವೀನ್.. ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ. cmcup2026-kgfsmashers team ಯಶಸ್ವಿ ವೃತ್ತಿಜೀವನದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಆಸಕ್ತಿಯನ್ನು ಸಮತೋಲನವಾಗಿ ಕಾಪಾಡಿಕೊಳ್ಳುವುದು ಅಂದುಕೊಂಡಷ್ಟು ಸುಲಭವಿಲ್ಲ. ಅದಕ್ಕೆ...








