ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಕೆಲವೇ ಹೊತ್ತಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಗೋಹತ್ಯೆ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ತರಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ವಿಧಾನಸಭೆಯಲ್ಲಿ ಅನುಮೋದನೆ ಪಡೆದಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನಪರಿಷತ್ನಲ್ಲಿ ಸರ್ಕಾರ ಮಂಡಿಸಿಲ್ಲ. ವಿಧಾನಪರಿಷತ್ನಲ್ಲಿ ಬಿಜೆಪಿಗೆ ಬಹುಮತದ ಕೊರತೆ ಇರುವ ಕಾರಣಕ್ಕೆ ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಿಲ್ಲ. ವಿವಾದಿತ ಭೂಸುಧಾರಣಾ ಕಾಯ್ದೆಯನ್ನು ವಿಧಾನಪರಿಷತ್ನಲ್ಲಿ ಸರ್ಕಾರ ಅನುಮೋದನೆ ಪಡೆದುಕೊಂಡಿದೆ. ಇದಕ್ಕೆ ಜೆಡಿಎಸ್ ಬೆಂಬಲದಿಂದ ಸುಲಭವಾಗಿ ವಿಧಾನಪರಿಷತ್ ಪಡೆದುಕೊಂಡಿದ್ದರೂ ಕೂಡ, ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲು ಸರ್ಕಾರ ವಿಳಂಬ ಮಾಡಿತು. ಕೊರೊನಾ ಕಾರಣಕ್ಕೆ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಂದೂಡಿದ ಪರಿಣಾಮ ಬಿಜೆಪಿಯ ಕನಸು ಭಗ್ನವಾಯಿತು. ಮತ್ತೊಮ್ಮೆ ಸಭಾಪತಿಗಳ ಮೇಲಿನ ಅವಿಶ್ವಾಸ ನಿರ್ಣಯದ ನೆಪದಲ್ಲಿ ಒಂದು ದಿನದ ವಿಶೇಷ ಅಧಿವೇಶನ ಕರೆದರೂ ಅಂದು ರಾದ್ದಾಂತಕ್ಕೆ ಕಾರಣವಾಗಿ ಅರ್ಧಗಂಟೆಯಲ್ಲೇ ಕೊನೆಗೊಂಡಿದೆ.
ಗೋಹತ್ಯೆ ಮಸೂದೆಗೆ ಜೆಡಿಎಸ್ ಕೂಡ ಬೆಂಬಲ ನೀಡುವುದಿಲ್ಲ ಎಂದು ಬಹಿರಂಗವಾಗಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಇಲ್ಲದೆ, ಚುನಾವಣೆಯಲ್ಲಿ ಮತದಾರರಿಗೆ ನೀಡಿದ ಭರವಸೆ ಈಡೇರಿಸಲು ಗೋಹತ್ಯೆ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲಿ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಇಂದಿನ ಸಂಪುಟ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








