corona infection ಸೋಂಕಿತರಿಗೆ ಸಮಸ್ಯೆಯಾದ್ರೆ 1912 ಗೆ ಕರೆ ಮಾಡಿ
ಬೆಂಗಳೂರು : ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಹೆಚ್ಚು ಸಮಸ್ಯೆಯಾದರೆ 1912 ಗೆ ಕರೆ ಮಾಡಿದರೆ ಮಾರ್ಗದರ್ಶನ ದೊರೆಯುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಪ್ರಧಾನಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಮನೆ ಆರೈಕೆ ವ್ಯವಸ್ಥೆ ಬಲಪಡಿಸಲು ಸೂಚನೆ ದೊರೆತಿದೆ.
ಎಲ್ಲರೂ ಆಸ್ಪತ್ರೆಗೆ ಹೋಗುವುದರಿಂದ ವೈದ್ಯಕೀಯ ಸಿಬ್ಬಂದಿಗೆ ಹೊರೆ ಹೆಚ್ಚಿದೆ. ಟೆಲಿ ಕಾಲಿಂಗ್ ನಿಂದ ಮಾರ್ಗದರ್ಶನ, ಚಿಕಿತ್ಸೆ ನೀಡಬೇಕೆಂದು ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೈಗೊಂಡ ಬಿಗಿ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಿಸಿದ್ದಾರೆ ಎಂದರು.
ಈ ತಿಂಗಳ ಕೊನೆಗೆ ದಿನಕ್ಕೆ 1 ಸಾವಿರ ಟನ್ ಆಕ್ಸಿಜನ್ ನೀಡಬೇಕು. ಮೇ 1 ರಿಂದ 1,500 ಟನ್ ಪ್ರತಿ ದಿನ ಆಕ್ಸಿಜನ್ ನೀಡಬೇಕು.
2 ಲಕ್ಷ ವೈಲ್ ರೆಮ್ ಡಿಸಿವಿರ್ ಅಮದಿಗೆ ಅನುಮರಿ ಕೊಡಬೇಕೆಂದು ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಕೋರಿದ್ದಾರೆ ಎಂದು ತಿಳಿಸಿದರು.